ಜಯನಗರ ಶ್ರೀ ರಾಘವೇಂದ್ರ ಸ್ವಾಮಿಮಠದಲ್ಲಿ ಭಕ್ತಿಯಿಂದಲೂ ಸಂಭ್ರಮದಿಂದಲೂ ಉತ್ಸವ

ಬೆಂಗಳೂರು, ಮೇ 22: ಜಯನಗರ ಐದನೇ ಬ್ಲಾಕ್‌ನಲ್ಲಿ ನೆಲೆಯೂರಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ, ಮೇ 22 ಗುರುವಾರದಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉಪಕ್ರಮಗಳು ಶ್ರದ್ಧಾ ಭರಿತವಾಗಿ ಆಯೋಜಿಸಲ್ಪಟ್ಟವು.

ಪೂಜ್ಯಪಾದ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞೆಯಂತೆ, ಮಠದ ಪ್ರಮುಖ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮುಂಜಾನೆ ಶ್ರೀ ರಾಯರಿಗೆ ಪಂಚಾಮೃತ ಸ್ನಾನ, ಚಿನ್ನದ ಅಭಿಷೇಕ, ವಿಶಿಷ್ಟ ಅಲಂಕಾರ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

ಸಂಜೆಯ ವೇಳೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮಗಳಲ್ಲಿ ರಥೋತ್ಸವ, ಗಜವಾಹನ ಶೋಭಾಯಾತ್ರೆ, ಅಷ್ಟಾವಧಾನ, ತೊಟ್ಟಿಲು ಆರಾಧನೆ ಸೇರಿದಂತೆ ಅನೇಕ ವಿಧ್ಯುಕ್ತ ಸೇವೆಗಳು ಭಕ್ತಿಭಾವಪೂರ್ವಕವಾಗಿ ಜರುಗಿದವು.

ಈ ಸಂದರ್ಭದಲ್ಲಿ ನೃತ್ಯ ಕಲಾವಿದರಾದ ಶ್ರೀಮತಿ ಮೇಖಲಾ ಅಗ್ನಿಹೋತ್ರಿ ಅವರ ಮಾರ್ಗದರ್ಶನದಲ್ಲಿ ಶ್ರೀ ವಿಜಯ ವಿಠಲ ನೃತ್ಯಾಲಯದ ವಿದ್ಯಾರ್ಥಿಗಳು ನೃತ್ಯ ಸೇವೆಗಳನ್ನು ನೆರವೇರಿಸಿದರು. ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಜಿ. ಕೆ. ಆಚಾರ್ಯರು ಉಪಸ್ಥಿತರಿದ್ದು, ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲ ಕಲಾವಿದರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ನರ್ತನ ಸೇವೆ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 3, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ 5000 ಭಕ್ತಾದಿಗಳಿಗೆ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನರ್ತನ ಕೀರ್ತನ ಸಂಸ್ಥೆಯ ಗುರು ವಿದುಷಿ ಶ್ರೀಮತಿ ಸೌಂದರ್ಯ ಶ್ರೀವತ್ಸ ಮತ್ತು ಅವರ ವಿದ್ಯಾರ್ಥಿಗಳಿಂದ ನರ್ತನ ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ‘ಧನುರ್ಮಾಸ” ದ್ವಾದಶಿ ಪ್ರಾತಃಕಾಲದ ವಿಶೇಷ ಪೂಜೆ

“ಮಂತ್ರಾಲಯ ಶ್ರೀಗಳಿಂದ ಧನುರ್ಮಾಸ ಪೂಜೆ” ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಶ್ರೀಮನ್ ಮೂಲರಾಮಚಂದ್ರದೇವರ ಸಂಸ್ಥಾನ ಪೂಜೆ ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ
‘ಧನುರ್ಮಾಸ” ದ್ವಾದಶಿ ಪ್ರಾತಃಕಾಲದ ವಿಶೇಷ ಪೂಜೆ, ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ನೆರವೇರಿತು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಶ್ರೀಗಳು ತಮ್ಮ ಅಮೃತ ಹಸ್ತದಿಂದ ಮಹಾಮಂಗಳಾರತಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ  ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್  ಹಾಗೂ ಭಕ್ತರು ಶಿಷ್ಯರು ಪೂಜೆಯಲ್ಲಿ ಭಕ್ತಿಯಿಂದ ಭಾಗವಹಿಸಿದ್ದರು ಎಂದು ಪುರೋಹಿತರಾದ ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಇದೇ ಸಂದರ್ಭದಲ್ಲಿ  ನೂರಾರು ಭಕ್ತರು ಶ್ರೀಗಳಿಂದ ತೀರ್ಥ ಫಲ ಮಂತ್ರಾಕ್ಷತೆ ಪ್ರಸಾದ ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ಸಂಜೆ “ಭರತನಾಟ್ಯ”

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 19, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಶ್ರೀಮತಿ ಕಾವ್ಯ ರಾವ್ ಅವರ ನಿರ್ದೇಶನದಲ್ಲಿ ಹೇಮಾದ್ರಿ ಸ್ಟುಡಿಯೋಸ್  ವಿದ್ಯಾರ್ಥಿಗಳಿಂದ “ಭರತನಾಟ್ಯ” ಕಾರ್ಯಕ್ರಮವು ವಿಶೇಷವಾಗಿ ಜರುಗಿತು ಎಂದು ಶ್ರೀ  ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ ಈ ಸಂದರ್ಭದಲ್ಲಿ ನೂರಾರು ಭಕ್ತರು ಭರತನಾಟ್ಯ ಕಾರ್ಯಕ್ರಮವನ್ನು ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೊಟ್ಟು ಸಂತೋಷ ವ್ಯಕ್ತಪಡಿಸಿದರು.

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ವಿಶೇಷ ಪೂಜೆ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವದ ವಿಶೇಷ ಉತ್ಸವದ ಅಂಗವಾಗಿ ಮಹಾರಥೋತ್ಸವ  ಶ್ರೀ ಹರಿ ಭಜನೆಯೊಂದಿಗೆ ವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದರು ಈ ಸಂದರ್ಭದಲ್ಲಿ ಭಕ್ತರು ಅನ್ನ ಸಂತರ್ಪಣೆಯ ಪ್ರಸಾದ ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ದಾಸರ ಅನುಗ್ರಹಕ್ಕೆ ಪಾತ್ರರಾದರು.

City Today News 9341997936