ಕಾರ್ಮಿಕ ಹಕ್ಕಿಗಾಗಿ ಬೃಹತ್ ಪ್ರತಿಭಟನೆ-‘ಎದ್ದೇಳಿ ಕಾರ್ಮಿಕರೇ ನಮ್ಮ ಹಕ್ಕು ನಾವು ಪಡೆಯೋಣ”.

ಕಾರ್ಮಿಕ ಹಕ್ಕಿಗಾಗಿ ಬೃಹತ್ ಪ್ರತಿಭಟನೆ

11/02/2024.

ಸ್ಥಳ ಫ್ರೀಡಂ ಪಾರ್ಕ್, ಬೆಂಗಳೂರು

ಎದ್ದೇಳಿ ಕಾರ್ಮಿಕರೇ ನಮ್ಮ ಹಕ್ಕು ನಾವು ಪಡೆಯೋಣ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸಾಮಾನ್ಯವಾಗಿ ಬಡತನದ ಬದುಕಿನಲ್ಲಿ ಬದುಕುತ್ತಾ ಹೆಚ್ಚಾಗಿ ಅವಿದ್ಯಾವಂತರಾಗಿರುತ್ತಾರೆ. ಇವರು ಕೆಲಸದಿಂದ ಕೆಲಸಕ್ಕೆ ಅಲೆದಾಡುತ್ತಾ ಕಟ್ಟಡ ನಿರ್ಮಾಣದಲ್ಲಿ ಮೇಸನ್, ಸೆಂಟ್ರಿಂಗ್, ಕಾರ್ಪೆಂಟರ್, ಪ್ಲಂಬಿಂಗ್, ಸಿಮೆಂಟ್ ಕಾಂಕ್ರೀಟ್ ಕೆಲಸ ಹಾಗೂ ಇನ್ನಿತರೆ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ತೊಡಗಿರುತ್ತಾರೆ. ಇವರಿಗೆ ಯಾವುದೇ ಭದ್ರತೆಯ ಬದುಕು ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಹಾಗೂ ನವೀಕರಣ ಮಾಡಿಸಿಕೊಳ್ಳಲು ಮಂಡಳಿಯು ಹಲವಾರು ಷರತ್ತುಗಳು ವಿಧಿಸಿರುತ್ತದೆ. ವೇತನ ಚೀಟಿ ಹಾಗೂ ಹಾಜರಾತಿ ನಿಯಮಗಳನ್ನು ರದ್ದುಗೊಳಿಸಬೇಕು. ಕಾರಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ನೋಂದಣಿ ನವೀಕರಣಕ್ಕಾಗಿ ನಿಯಮಗಳನ್ನು ಸರಳೀಕರಣಗೊಳಿಸಲು ಸೂಕ್ತ ಆದೇಶವನ್ನು ನೀಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.

ಹೀಗಿರುವಾಗ ಕಾಮಿಕರು ಅತಂತ್ರ ಬದುಕು ಸಾಗಿಸುತ್ತ ಕೆಲಸ ನಿರ್ವಹಿಸುವ ಸಮಯದಲ್ಲಿ ನೋಂದಣಿಯಾಗಿ ಹಾಗೂ ನವೀಕರಣಕ್ಕಾಗಿ ಕಟ್ಟಡ ಪರವಾನಿಗೆ ಪತ್ರ ಹಾಗೂ ನಕ್ಷೆ, ವೇತನ ಚೀಟಿ ಹಾಗೂ ಹಾಜರಾತಿ ಪುಸ್ತಕ ಕೇಳಿರುವುದು ಇವರಿಗೆ ಒದಗಿಸಿಕೊಡುವುದು ಅಸಾಧ್ಯ ವಿಷಯವಾಗಿರುತ್ತದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಇಂತಹ ಜಾಗದಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದಾಗ ಅದನ್ನು ಪರಿಶೀಲಿಸಿ ಸತ್ಯ ಅಸತ್ಯತೆಯನ್ನು ತನಿಖೆ ಮಾಡುವ ಅಧಿಕಾರ ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರಿಗೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಕಾನೂನುಗಳನ್ನು ಜಾರಿ ಮಾಡಿರುವುದರಿಂದ ಸಾವಿರಾರು ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. :

1) ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರಿಗೆ ರೂ.5,00,000/-ಗಳ ವಸತಿ ಸೌಲಭ್ಯವನ್ನು ಕಾರ್ಮಿಕ ಇಲಾಖೆಯಿಂದ ಕೂಡಲೆ ಘೋಷಣೆ ಆಗಬೇಕು.

2) ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್, ಕಾರ್ಮಿಕ ಇಲಾಖೆಯಿಂದ ಕೂಡಲೇ ನೀಡಲು ಆದೇಶ ಹೊರಡಿಸಬೇಕು.

3) ಕರ್ನಾಟಕ ರಾಜ್ಯಾದ್ಯಂತ ಜಿಲ್ಲೆ ಮತ್ತು ತಾಲ್ಲೋಕುಗಳಲ್ಲಿ ಕಾರ್ಮಿಕ ಕಲ್ಯಾಣ ಮಂಟಪ ಮತ್ತು ಕಾರ್ಮಿಕ ಸಮುದಾಯ ಭವನ ನಿರ್ಮಾಣವಾಗಬೇಕು.

4) ಕಾರ್ಮಿಕರಿಗೆ 2013 ರಿಂದ ಸತತವಾಗಿ ಕನಿಷ್ಟ ವೇತನ ನೀಡಬೇಕಾಗಿ ಕೇಳಿದರು ಕೂಡ ಇದುವರೆಗೂ ಬೇಡಿಕೆ, ಈಡೇರಿಸಿಲ್ಲ ಹಾಗಾಗಿ ಕನಿಷ್ಟ ವೇತನ ಒಳಪಡುವ ಕಾರ್ಮಿಕರಿಗೆ 35 ಸಾವಿರ ರೂ.ಗಳನ್ನು ನಿಗದಿಪಡಿಸಬೇಕು.

5) ಕಾರ್ಮಿಕ ಮಕ್ಕಳಿಗೆ ವಿದ್ಯಾಬ್ಯಾಸಕ್ಕಾಗಿ, ನೀಡುತ್ತಿರುವ ಸೌಲಭ್ಯವನ್ನು 2019-20ನೇ ಸಾಲಿನಲ್ಲಿ ಏನು ನಿಗದಿ ಆಗಿದೆಯೋ ಅದೇ ಸೌಲಭ್ಯವನ್ನು 2023-24ನೇ ಸಾಲಿನಲ್ಲೂ ಕೂಡಲೇ ನೀಡಬೇಕು.

6) ನೋಂದಣಿ ಆಗಿರುವ ಕಾರ್ಮಿಕರಿಗೆ ಚಿಕಿತ್ಸೆಗಾಗಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಮಿಕರು ಚಿಕಿತ್ಸೆ ಹಾಗೂ ಆಪರೇಷನ್‌ಗೆ ಒಳಪಟ್ಟಲ್ಲಿ 5 ವರ್ಷದವರೆಗೆ ಮರು ಪಾವತಿ ನೀಡಬೇಕಾಗಿ ಅನುಕೂಲ ಮಾಡಿ ಕೊಡಬೇಕು, ಇದು ರಾಜ್ಯಾದ್ಯಂತ.

7) ಕಾರ್ಮಿಕ ಇಲಾಖೆ ವತಿಯಿಂದ ವಂತಿಗೆ ಹಣವನ್ನು ಇಡೀ ರಾಜ್ಯಾದ್ಯಂತ ಶೇಕಡ 2% ಹೆಚ್ಚುವರಿಯಾಗಿ ಏರಿಸಿ ಪಾವತಿ ಮಾಡಿಸಿಕೊಳ್ಳಬೇಕು.

8) ಇಡೀ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಲ್ಲಿ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಪಿ.ಎಫ್ ಮತ್ತು ಇ.ಎಸ್.ಐ ಕೂಡಲೇ ಜಾರಿಗೆ ತರಬೇಕು.

9) ರಾಜ್ಯಾದ್ಯಂತ ನೋಂದಣಿಯಾಗಿರುವ ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು

ಮಾಡುತ್ತಿರುವುದರಿಂದ ಮಂಡಳಿಯಲ್ಲಿರುವ ಹಣವು ದುರುಪಯೋಗವಾಗುತ್ತಿದೆ. ಆದ * ಕಾರಣ ಆರೋಗ್ಯ ತಪಾಸಣೆಯನ್ನು ಕೂಡಲೇ ನಿಲ್ಲಿಸಬೇಕು.

10) ಕಾರ್ಮಿಕ ದಿನಾಚರಣೆ ಮೇ 1ರ ದಿನದಂದು ನೋಂದಣಿ ಆಗಿರುವ ಕಟ್ಟಡ ಕಾರ್ಮಿಕರಿಗೆ 25 ಸಾವಿರ ರೂಪಾಯಿಗಳನ್ನು ಬೋನಸ್ ಮೂಕಾಂತರ ನೀಡಬೇಕು.

11) ಇದೇ ಮಾದರಿಯಲ್ಲಿ ಲೇಬರ್ ವೆಲ್‌ಫೇರ್ ಬೋರ್ಡಿನಲ್ಲಿ ವಂತಿಕೆ ಹಣವನ್ನು ಕಟ್ಟುತ್ತಿರುವ ಕಾರ್ಮಿಕರಿಗೆ ಮೇ 1ರ ದಿವಸದಂದು 25 ಸಾವಿರ ರೂಪಾಯಿಗಳನ್ನು ಬೋನಸ್ ಮುಖಾಂತರ ನೀಡಬೇಕು.

12) ಕಟ್ಟಡ ಪರವಾನಿಗೆ ಪತ್ರ/ನಕ್ಷೆ ಅನುಮೋದನೆಯನ್ನು ಈ ಕೂಡಲೇ ಹಿಂಪಡೆಯಬೇಕು.

14) ರಾಜ್ಯಾದ್ಯಂತ ಕಾರ್ಖಾನೆಗಳು, ಮಾಲ್‌ಗಳು, ಲಾಡ್ಜ್ ಗಳು, ಹೋಟೆಲ್‌ಗಳು, ಪೆಟ್ರೋಲ್ ಬಂಕ್‌ಗಳು, ಗಾರ್‌ಮೆಂಟ್ಸ್ಗಳು ಮತ್ತು ಸೆಕ್ಯೂರಿಟಿಗಳಲ್ಲಿ ಕೆಲಸ ಮಾಡುವವರಿಗೆ ವೇತನ ಚೀಟಿ ನ್ಯಾಯಯುತವಾಗಿ ಸಿಗುತ್ತಿಲ್ಲ. ಇದನ್ನು ನ್ಯಾಯಯುತವಾಗಿ ಸಿಗುವಂತೆ ಕಡ್ಡಾಯಗೊಳಿಸಿ. A

15) ವಿವಿಧ ಕಾರ್ಮಿಕರಿಗೆ ನೀಡುವ ಕಿಟ್‌ಗಳಿಗಾಗಿ ವಹಿಸುವ ಟೆಂಡರ್‌ನ್ನು ತಕ್ಷಣವೇ ರದ್ದುಪಡಿಸಬೇಕು.

16) ಸಂಚಾರಿ ವಾಹನ ಚಿಕಿತ್ಸೆಯನ್ನು ತಕ್ಷಣವೇ ರದ್ದುಗೊಳಿಸಬೇಕು.

17) 2023-24ನೇ ಸಾಲಿನ ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಾರಂಭಿಸಬೇಕು.

18) ನವೀಕರಣವನ್ನು ಮೊದಲಿನಂತೆ ಮೂರು ವರ್ಷದ ಅವಧಿಗೆ ವಿಸ್ತರಿಸಬೇಕು.

19) ಮದುವೆ ದನ ಸಹಾಯ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಬೇಕು.

20) ಸ್ಥಗಿತಗೊಂಡಿರುವ ಮುಂದುವರಿಕೆ ಪೆನ್ನನ್ ಸೌಲಭ್ಯವನ್ನು ಕೂಡಲೇ ಪ್ರಾರಂಭಿಸಬೇಕು.

21) 60 ವರ್ಷಗಳ ನಂತರ ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು.

22) ನೋಂದಾಯಿತ ಬೋಗಸ್ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ ಸ್ಲಂ ಬೋರ್ಡ್‌ ಗೆ ನಿಡಿದ ಧನ ಸಹಾಯವನ್ನು ತನಿಖೆಗೆ ಒಳಪಡಿಸಿ ಮಂಡಳಿಗೆ ಅನುದಾನವನ್ನು ಹಿಂಪಡೆಯಬೇಕು.

23) ರಾಜ್ಯ ಸರ್ಕಾರವು ಫೆಬ್ರವರಿ 2024ರ ಬಡಜೆಟ್‌ನಲ್ಲಿ ಕಾರ್ಮಿಕರಿಗಾಗಿ 1000 ಕೋಟಿ ರುಪಾಯಿಗಳ ಅನುದಾನವನ್ನು ಘೋಷಣೆ ಮಾಡಬೇಕು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಬೇಕಾಗಿ ಒತ್ತಾಯಸಿದ್ದೇವೆ. ಇದರ ಜೊತೆಗೆ ಕೆಲವು ಕಾರ್ಮಿಕರ ಕನ್ನಡ ಪರ ರೈತಪರ ದಲಿತಪರ ಹಾಗೂ ಇನ್ನೂ ಕೆಲವು ಸಂಘಟನೆಗಳ ಸಹಕಾರದೊಂದಿಗೆ ಕಾರ್ಮಿಕರ ವಿವಿಧ ಬೇಡಿಕೆಗಳ ಹೀಡೇರಿಕೆಗಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ಮಾಡಲಿದ್ದು. ಈ ಮೇಲಿನ ಎಲ್ಲಾ ಬೇಡಿಕೆಗಳು ಶೀಘ್ರವೇ ಈಡೇರದೇ ಇದ್ದಲ್ಲಿ ನಾವುಗಳು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿಗಳ ಮುಂದೆ ಉಗ್ರ ಸ್ವರೂಪದ ಹೋರಾಟಗಳನ್ನು ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆಂದು ಈ ಮೂಲಕ ತಮ್ಮಲ್ಲಿ ತಿಳಿಯಪಡಿಸುತ್ತಿದ್ದೇವೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಒಕ್ಕೂಟದ ವತಿಯಿಂದ ತಿಳಿಸಲಾಯಿತು.

City Today News 9341997936

ಕರ್ನಾಟಕ ರಾಜ್ಯದ ಕೆ.ಎಫ್.ಸಿ.ಎಸ್.ಸಿ.ಯ ಎಲ್ಲಾ ಗೋಡನ್‌ಗಳಲ್ಲಿ ಕೆಲಸ ಮಾಡುತ್ತಿರುವ ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕಾರ್ಮಿಕರ ಬೇಡಿಕೆಗಳನ್ನು ಒತ್ತಾಯಿಸಿ ದಿನಾಂಕ : 17-01-2022 ರಿಂದ ಎಲ್ಲಾ ಗೋಡನ್‌ಗಳ ಮುಂದೆ ಪ್ರತಿಭಟನೆ

ಕರ್ನಾಟಕ ರಾಜ್ಯದ ಕೆ.ಎಫ್.ಸಿ.ಎಸ್.ಸಿ.ಯ ಎಲ್ಲಾ ಗೋಡನ್‌ಗಳಲ್ಲಿ 3000 ಕ್ಕೂ ಹೆಚ್ಚು ಕಾರ್ಮಿಕರು ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕೆಲಸವನ್ನು 1973 ರಿಂದ ನಿರಂತರವಾಗಿ ನಿರ್ವಹಿಸುತ್ತಿದ್ದಾರೆ . ಈ ಕಾರ್ಮಿಕರಿಗೆ ಈ ಕೆಳಕಂಡ ಅರ್ಹ ಸವಲತ್ತುಗಳನ್ನು ನೀಡಲು ಆದೇಶಬದ್ದರು ಎಲ್ಲಾ ಜಿಲ್ಲೆಯ ಜೆ.ಎಫ್.ಸಿ.ಎಸ್.ಸಿ. ಹಾಗೂ ಆಹಾರ , ನಾಗಲೀಕ ಸರಬರಾಜು ಗ್ರಾಹಕರ ಇಲಾಖೆಯ ಅಧಿಕಾರಿಗಳು ನೀಡುತ್ತಿಲ್ಲ . ಈ ಕೆಳಕಂಡ ಬೇಡಿಕೆಗಳನ್ನು ಕೂಡಲೇ ಜಾರಿಗೊಳಿಸುವಂತೆ ಪ್ರತಿಭಟನೆ ನಡೆಸಲಾಗುವುದು .

* ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕಾರ್ಮಿಕರಿಗೆ ಸಾಲಿಗೆ ಗುತ್ತಿಗೆದಾರರಾಗಲೀ ಅಥವಾ ಗೋಡನ್ ವ್ಯವಸ್ಥಾಪಕರಾಗಲೀ ವೇತನ ಚೀಟಿ , ಉದ್ಯೋಗ ಪತ್ರ , ಗುರುತಿನ ಚೀಟ , ಹಕ್ಕಿನ ರಜೆಗಳ ಸವಲತ್ತು ಕೂಡಲೇ ನೀಡಬೇಕು .

* ರಾಜ್ಯದ ಎಲ್ಲಾ ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕಾರ್ಮಿಕರಿಗೆ ಭವಿಷ್ಯನಿಧಿ , ಇ.ಎಸ್.ಐ. ಕಟ್ಟಬೇಕಿರುವ ದಿನಾಂಕದಿಂದl ಕಟ್ಟಿಸಿ ಅದರ ಸಂಪೂರ್ಣ ಮಾಹಿತಿಯನ್ನು ನಮ್ಮ ಸಂಘಟನೆಗೆ ನೀಡಬೇಕು .

* ರಾಜ್ಯದ ಗೋಡನ್‌ಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ 2018 ರಲ್ಲಿ ರೂ.16- ಹೆಚ್ಚಳ ಮಾಡಿದ್ದಾರೆ . ಅಂದಿನಿಂದ ಬೆಲೆ ಏರಿಕೆ , ಜೀವನ ನಿರ್ವಹಿಸಲು ಕಷ್ಟಕರವಾಗಿರುವುದರಿಂದ ಇಂದು ಕಾರ್ಮಿಕರಿಗೆ ಲೋಡಿಂಗ್ ಅಂಡ್ ಅನ್‌ಲೋಡಿಂಗ್‌ಗೆ 16- ರೂ.ಗಳಿಂದ 25 ರೂ.ಗಳಿಗೆ ಹೆಚ್ಚಿಸಿ , ಅದೇ ರೀತಿ ಎಫ್.ಸಿ.ಐ.ನಿಂದ ಕೆ.ಎಫ್.ಸಿ.ಎಸ್.ಸಿ.ಗೆ ಬರುವ ಅನ್‌ಲೋಡಿಂಗ್ ದರವನ್ನು ರೂ .08 – 13 ರೂ.ಗೆ ಹೆಚ್ಚಳ ಮಾಡಬೇಕು .

* ಕಾರ್ಮಿಕ ಕಾಯಿದೆ ಪ್ರಕಾರ ಕಾರ್ಮಿಕರಿಗೆ ಕೆಲಸದ ವೇಳೆ , ನಿವೃತ್ತಿಯಾದ ಕಾರ್ಮಿಕರಿಗೆ ಗಾಚ್ಯುಟಿ ಮತ್ತು ನಿವೃತ್ತಿ ವೇತನ ನೀಡಬೇಕು .

* ಕಾರ್ಮಿಕರಿಗೆ ಕಾನೂನಿನ ಪ್ರಕಾರ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕು .

* ಭಾರತದ ಆಹಾರ ನಿಗಮದಲ್ಲಿ ( ಎಫ್.ಸಿ.ಐ. ) ನೀಡುತ್ತಿರುವ ವೇತನದ ಪ್ರಕಾರ ಕೆ.ಎಚ್.ಸಿ.ಎಸ್.ಸಿ. , ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕಾರ್ಮಿಕರಿಗೂ ಸವಲತ್ತು ನೀಡಬೇಕು .

* ಕಾರ್ಮಿಕನಿಗೆ ಅಪಘಾತ ಉಂಟಾದರೂ ಯಾವುದೇ ಪರಿಹಾರ ನೀಡುತ್ತಿಲ್ಲ ಇದನ್ನು ನೀಡಬೇಕು .

ಈ ಮೇಲ್ದಂಡ ಬೇಡಿಕೆಗಳ ಬಗ್ಗೆ ಒತ್ತಾಯಿಸಿ ನಡೆಸುವ ಹೋರಾಟದಲ್ಲಿ ಎಲ್ಲಾ ಕಾರ್ಮಿಕರು ಸಕ್ರೀಯವಾಗಿ ಭಾಗವಹಿಸಿ ತಮ್ಮ ತಮ್ಮ ಗೋಡನ್‌ಗಳ ಮುಂದೆ ಪ್ರತಿಭಟನೆ ನಡೆಸಬೇಕೆಂದು ಸಂಘದ ವತಿಯಿಂದ ಕಳಕಳಿಯ ಮನವಿ

-ಕರ್ನಾಟಕ ಫುಡ್ ಅಂಡ್ ಸಿವಿಲ್ ಸಪ್ಲೈ , ಕಾರ್ಪೊರೇಷನ್ ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಲೇಬರ್ ಯೂನಿಯನ

City Today News

9341997936