
ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ “ಭಾರತ ಹುಣ್ಣಿಮೆ-ವ್ಯಾಸ ಪೌರ್ಣಮಿ” ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ರಾಘವೇಂದ್ರ ಕಟ್ಟಿ ಆಚಾರ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಮತ್ತು ಸೇವಾ ಕರ್ತೃಗಳು ಶ್ರೀ ಸತ್ಯನಾರಾಯಣ ವ್ರತ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936

You must be logged in to post a comment.