ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ “ಧಾತ್ರಿ ಹೋಮ” ಲೋಕಕಲ್ಯಾಣಕ್ಕಾಗಿ


ಬೆಂಗಳೂರಿನ ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ಮಾರ್ಗದರ್ಶನದಲ್ಲಿ ‘ಲೋಕ ಕಲ್ಯಾಣಕ್ಕಾಗಿ” ಧಾತ್ರಿ ಹೋಮದ ಕಾರ್ಯಕ್ರಮವನ್ನು  ರಾಮಚಂದ್ರ ಆಚಾರ್ಯರಿಂದ ನೆರವೇರಿಸಲಾಯಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು. ವಿಶೇಷವಾಗಿ ಬೆಳ್ಳಿಯ ತೊಟ್ಟಿಲಿನಲ್ಲಿ ಶ್ರೀ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನು  ಕೂರಿಸಿ ರಜತ ಕಳಸಗಳಲ್ಲಿ ಲಕ್ಷ್ಮೀ ನರಸಿಂಹ ದೇವರನ್ನು ಆಹ್ವಾನಿಸಿ ಚಾತುರ್ಮಾಸ ಸಮಾಪ್ತಿಯ ಅಂಗವಾಗಿ ವಿಶೇಷವಾಗಿ ಪೂಜೆಯನ್ನು ರಥೋತ್ಸವದೊಂದಿಗೆ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಭಕ್ತರು ಮತ್ತು ಸೇವಾ ಕರ್ತೃಗಳು ಸಂಕಲ್ಪವನ್ನು ಮಾಡಿ ಪೂಜೆಯಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

‘ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ “ಮಧ್ಯಾರಾಧನೆ” ರಾಯರ ಮಠದಲ್ಲಿ ಹಬ್ಬದ ಸಂಭ್ರಮ”

ಬೆಂಗಳೂರು ಆಗಸ್ಟ್ 21-ಈ ದಿನ ಶ್ರೀ ರಾಘವೇಂದ್ರ ಸ್ವಾಮಿಗಳು ಬೃಂದಾವನದ ಒಳಗಡೆ ಜೀವಂತವಾಗಿ ಪ್ರವೇಶಿಸಿದ ದಿನ.  ಈ ಮಧ್ಯಾರಾಧನೆಯ ಅಂಗವಾಗಿ ರಾಯರ ಬೃಂದಾವನಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರದೊಂದಿಗೆ  ಮಹಾ ಅಭಿಷೇಕವು ಜಯನಗರದ 5ನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನೆರವೇರಿತು. ನಂತರ ರಾಯರ ಬೃಂದಾವನಕ್ಕೆ ವಿಶೇಷ ರತ್ನ ಕವಚದ ಅಲಂಕಾರ, ಬೆಳಗ್ಗೆ 7:00 ರಿಂದ 11 ಗಂಟೆಯವರೆಗೆ ಸ್ವರ್ಣ ಸಿಂಹಾಸನದಲ್ಲಿ ರಾಯರ ಪ್ರತೀಕವನ್ನು ಇರಿಸಿ ರಾಯರ ಪಾದಪೂಜೆ, ಫಲ ಪುಷ್ಪ ಸಮರ್ಪಣೆ, 11ಕ್ಕೆ ಸುವರ್ಣ ಕನಕಾಭಿಷೇಕ, ಮಹಾಮಂಗಳಾರತಿ ನಡೆಯಲಿದ್ದು ಸಹಸ್ರಾರು ಭಕ್ತರಿಗೆ “ಅನ್ನ ಸಂತರ್ಪಣೆ” ನೆರವೇರಲಿದೆ. ಶ್ರೀ ಮಠಕ್ಕೆ ಆಗಮಿಸುವ ಸಹಸ್ರಾರು ಭಕ್ತ ಜನರು ರಾಯರ ದರ್ಶನ, ತೀರ್ಥ, ಫಲ ಮಂತ್ರಾಕ್ಷತೆ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಿ ಶ್ರೀಮಠದ  ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕಂಡು ಭಕ್ತರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ಈ ದಿನ ಸಂಜೆ 5 ರಿಂದ ರಾಯರ ಬಗ್ಗೆ ಪ್ರವಚನ,  6ಕ್ಕೆ  ರಥೋತ್ಸವ ಜರಗಲಿದ್ದು ನಂತರ 7 ಗಂಟೆಗೆ  ಬೆಂಗಳೂರು ಸಹೋದರರಾದ ವಿದ್ವಾನ್ ಹರಿಹರನ್ ಎಂ ಬಿ, ವಿದ್ವಾನ್  ಅಶೋಕ್ ಎಸ್  ಮತ್ತು ವೃಂದದವರಿಂದ “ದಾಸ ತರಂಗಿಣಿ” ಕಾರ್ಯಕ್ರಮ  ನಡೆಯಲಿದೆ ಎಂದು ಈ ಮಠದ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರು ತಿಳಿಸಿದರು. ವಿಶೇಷವಾಗಿ ಗುರುವಾರ 22ನೇ ತಾರೀಕು ಬೆಳಗ್ಗೆ 8:30ಕ್ಕೆ ಜಯನಗರದ  ರಾಜಬೀದಿಗಳಲ್ಲಿ ಮಹಾರಥೋತ್ಸವದ  ಮೆರವಣಿಗೆಯು ಹೊರಡಲಿದೆ ಭಕ್ತಾದಿಗಳು ಭಕ್ತಿಯಿಂದ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಬಹುದು.

City Today News 9341997936