
ಬೆಂಗಳೂರಿನ ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ಮಾರ್ಗದರ್ಶನದಲ್ಲಿ ‘ಲೋಕ ಕಲ್ಯಾಣಕ್ಕಾಗಿ” ಧಾತ್ರಿ ಹೋಮದ ಕಾರ್ಯಕ್ರಮವನ್ನು ರಾಮಚಂದ್ರ ಆಚಾರ್ಯರಿಂದ ನೆರವೇರಿಸಲಾಯಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು. ವಿಶೇಷವಾಗಿ ಬೆಳ್ಳಿಯ ತೊಟ್ಟಿಲಿನಲ್ಲಿ ಶ್ರೀ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನು ಕೂರಿಸಿ ರಜತ ಕಳಸಗಳಲ್ಲಿ ಲಕ್ಷ್ಮೀ ನರಸಿಂಹ ದೇವರನ್ನು ಆಹ್ವಾನಿಸಿ ಚಾತುರ್ಮಾಸ ಸಮಾಪ್ತಿಯ ಅಂಗವಾಗಿ ವಿಶೇಷವಾಗಿ ಪೂಜೆಯನ್ನು ರಥೋತ್ಸವದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ಮತ್ತು ಸೇವಾ ಕರ್ತೃಗಳು ಸಂಕಲ್ಪವನ್ನು ಮಾಡಿ ಪೂಜೆಯಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936



You must be logged in to post a comment.