
ಬೆಂಗಳೂರು, ಜಯನಗರ: ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಮಧ್ವ ನವಮಿ ಪ್ರಯುಕ್ತ ಭಕ್ತಿಪೂರ್ಣ ಆಚರಣೆ ನಡೆಯಿತು. ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ ಹಾಗೂ ಜಿ. ಕೆ. ಆಚಾರ್ಯರ ನೇತೃತ್ವದಲ್ಲಿ ಈ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.
ಉತ್ಸವದ ಅಂಗವಾಗಿ ಶ್ರೀ ಮಧ್ವಾಚಾರ್ಯರಿಗೆ ವಿಶೇಷ ಮಧು ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೇಂಗಾರ ಅಲಂಕಾರ, ಸುಮಧ್ವ ವಿಜಯ ಪಾರಾಯಣ, ವಿದ್ವಾಂಸರಿಂದ ಪ್ರವಚನ, ರಥೋತ್ಸವ, ಕನಕಾಭಿಷೇಕ, ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆಯು ಅದ್ಧೂರಿಯಾಗಿ ನಡೆಸಲಾಯಿತು. ಈ ಪವಿತ್ರ ಕಾರ್ಯಕ್ರಮದಲ್ಲಿ 5,000ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡು ಧಾರ್ಮಿಕ ಸೇವೆ ಸಲ್ಲಿಸಿದರು.
ಇನ್ನೂ, ಸಹಸ್ರಾರು ಭಕ್ತರಿಗೆ “ಅನ್ನ ಸಂತರ್ಪಣೆ” ವ್ಯವಸ್ಥೆ ಮಾಡಲಾಗಿದ್ದು, ಭಕ್ತಾದಿಗಳು ಶ್ರೀ ಹರಿ, ವಾಯು, ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ಧಾರ್ಮಿಕ ಮಹೋತ್ಸವವು ಭಕ್ತರಲ್ಲಿ ಭಕ್ತಿಭಾವ ಮತ್ತು ಆಧ್ಯಾತ್ಮಿಕತೆಯನ್ನು ಹೆಚ್ಚಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
City Today News 9341997936

You must be logged in to post a comment.