ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿದ ತೀರ್ಮಾನವನ್ನು ಬಿ.ಎಂ.ಟಿ.ಸಿ ಮದ್ದೂರ್ ಸಂಘ (ರಿ), ಬೆಂಗಳೂರು ಹಾಗು ಕರ್ನಾಟಕ ರಸ್ತೆ ಸಾರಿಗೆ ಮಜೂರ್ ಸಂಘ ಒಕ್ಕೂಟ ಸ್ವಾಗತಿಸುತ್ತದೆ.

ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ.

‘ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯನ್ನು ಪ್ರಾರಂಭದಿಂದ ಇಲ್ಲಿವರೆಗೂ ಹಗಲು-ರಾತ್ರಿ ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಹಬ್ಬ ಹರಿದಿನಗಳನ್ನು ಬದಿಗೊತ್ತಿ ಕರ್ತವ್ಯ ನಿರ್ವಹಿಸಿ ಯಶಸ್ವಿಗೊಳಿಸಿದ ಸಾರಿಗೆ ಕಾರ್ಮಿಕ ವರ್ಗದ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಗಮನ ಹರಿಸಬೇಕಿದೆ.

1,35,000 ಸಾರಿಗೆ ಕಾರ್ಮಿಕರು 01-01-24 ವೇತನ ಪರಿಷ್ಕರಣೆ ಹಾಗೂ 01-01-2020 ರ ಹಿಂಬಾಕಿ ವೇತನ ಪಾವತಿ ವಿಷಯದಲ್ಲಿ ಅನೇಕ ಬಾರಿರಾಜ್ಯ ಸರ್ಕಾರಕ್ಕೆ ನಮ್ಮ ಸಂಘ ಮನವಿ ಸಲ್ಲಿಸಿದೆ. 2023 ರಲ್ಲಿ ನಿವೃತ್ತಿಯಾದ ನೌಕರರಿಗೆ ಉಪಧನ ಹಾಗು ಹಿಂಬಾಕಿ ಪಾವತಿ ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿವೃತ್ತ ನೌಕರರು ಬೇಡಿಕೆ ಇಟ್ಟು ಕಾಯುತ್ತಿದ್ದಾರೆ.

ಲಕ್ಷಾಂತರ ಸಾರಿಗೆ ಕಾರ್ಮಿಕರು ಹಾಗು ನಿವೃತ್ತ ನೌಕರರು ಸಂಕಷ್ಟದಲ್ಲಿ ಇದ್ದಾರೆ. ಆದ ಕಾರಣ ಮಾನ್ಯ ಮುಖ್ಯಮಂತ್ರಿಗಳು ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣಿಯ ವಿಷಯದಲ್ಲಿ ಮತ್ತು ನಿವೃತ್ತಿಯಾದ ನೌಕರರಿಗೆ ಉಪಧನ ಹಾಗು ಹಿಂಬಾಕಿ ಪಾವತಿ ವಿಷಯದಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಮಸ್ತ ಕಾರ್ಮಿಕ ವರ್ಗದ ಪರವಾಗಿ ರಸ್ತೆ ಸಾರಿಗೆ ಮಜದೂರ್ ಸಂಘದ ವತಿಯಿಂದ ಅಧ್ಯಕ್ಷರಾದ ಮಾದಯ್ಯನವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯ ಮಾಡಿದರು.

City Today News 9341997936