
ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ಹನುಮ ಜನ್ಮೋತ್ಸವದ ಪ್ರಯುಕ್ತ ಏಪ್ರಿಲ್ 23, ಮಂಗಳವಾರ ಬೆಳಗ್ಗೆ ಮುಖ್ಯಪ್ರಾಣ ದೇವರಿಗೆ ಮಧು ಅಭಿಷೇಕ, ರತ್ನ ಕವಚ ಧಾರಣೆ ಮತ್ತು ಚಿತ್ತಾ ಪೂರ್ಣಿಮೆ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು, ಈ ಸಂದರ್ಭದಲ್ಲಿ ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ, ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936

You must be logged in to post a comment.