ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ 9 ನೇ ವರ್ಷದ ರಾಜ್ಯ ಮಟ್ಟದ ಭಜನಾ ಸ್ಪರ್ಧೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ 9 ನೇ ವರ್ಷದ ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ-ಧರ್ಮದರ್ಶಿ ಶಾಮಾನಂದ ಪೂಜೇರಿ

ಜಗದ್ಗುರು ಶ್ರೀ ಸಿದ್ದಾರೂಢ ಮಹಾಸ್ವಾಮಿಗಳವರ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:- 10.04.2024 ರಿಂದ 15.04.2024 ರವರೆಗೆ ರಾಜ್ಯ ಮಟ್ಟದ ಒಂಭತ್ತನೇ ವರ್ಷದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಭಜನಾ ತಂಡದವರು ದಿನಾಂಕ:10.04.2024 ರೊಳಗಾಗಿ ಶ್ರೀಮಠದ ಟ್ರಸ್ಟ್ ಕಮೀಟಿಯ ಕಾರ್ಯಾಲಯದಲ್ಲಿ ಹೆಸರು ನೋಂದಾಯಿಸಬೇಕೆಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷರು ಹಾಗೂ ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಪೂಜೇರಿ ಇವರು ತಿಳಿಸಿದರು. ಭಾಗವಹಿಸುವ ಭಜನಾ ಮೇಳದವರಿಗೆ ಶ್ರೀಮಠದಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗುವುದು. ಮತ್ತು ಒಂದು ಬದಿಯ ಬಸ್ಸು ಚಾರ್ಜನ್ನು ಪ್ರತಿ ತಂಡದ 6ಜನರಿಗೆ ನೀಡಲಾಗುವದು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಂದು ಭಜನಾ ತಂಡಕ್ಕೆ “ಸವಿನೆನಪಿನ ಕಾಣಿಕೆ” ಹಾಗೂ ಪ್ರತಿಯೊಂದು ತಂಡದ ಪ್ರತಿಯೊಬ್ಬ ಕಲಾವಿದರಿಗೂ “ಪ್ರಶಸ್ತಿ ಪತ್ರ” ನೀಡಲಾಗುವದು ಎಂದು ತಿಳಿಸಿದ್ದಾರೆ.ದಿನಾಂಕ:-10.04.2024 ರಂದು ಮುಂಜಾನೆ 10-30 ಕ್ಕೆ ಉದ್ಘಾಟನಾ ಸಮಾರಂಭ ಜರುಗುವುದು.

ಬಹುಮಾನಗಳ ವಿವರ:- ಪ್ರಥಮ : ರೂ.1,00,000/- ದ್ವಿತೀಯ: ರೂ.80,000/- ತೃತೀಯ: ರೂ. 70,000/- – ಸಮಾಧಾನಕರ: ರೂ.9,000/-* (ಹತ್ತು ತಂಡಗಳನ್ನು ಆಯ್ಕೆಮಾಡಿ, ಪ್ರತಿ ತಂಡಕ್ಕೆ ರೂ.9,000/- ನೀಡಲಾಗುವುದು.) * 16 ವರ್ಷದ ಒಳಗಿನ ಬಾಲಕ ಹಾಗೂ ಬಾಲಕಿಯರಿಗೆ ಪ್ರತಿಭಾ ಪುರಸ್ಕಾರ ರೂ. 10,000.00 (ಒಂದು ಬಾಲಕರ ತಂಡ ಮತ್ತು ಒಂದು ಬಾಲಕಿಯರ ತಂಡಕ್ಕೆ ಮಾತ್ರ) ಮಹಿಳಾ ಭಜನಾ ತಂಡಕ್ಕೆ ಪುರಸ್ಕಾರ ರೂ.10.000.00 (ಒಂದು ತಂಡಕ್ಕೆ ಮಾತ್ರ)

ವಯಕ್ತಿಕ ಬಹುಮಾನಗಳ ವಿವರ :- ಉತ್ತಮ ಹಾಡುಗಾರರಿಗೆ : 3,000/- (ಇಬ್ಬರಿಗೆ ಮಾತ್ರ) ಉತ್ತಮ ಹಾರ್ಮೋನಿಯಂ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ) ಉತ್ತಮ ತಬಲಾ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ) ಉತ್ತಮ ತಾಳ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ) ಉತ್ತಮ ಧಮಡಿ ವಾದಕರಿಗೆ ರೂ.3,000/- (ಇಬ್ಬರಿಗೆ ಮಾತ್ರ)

ಭಜನಾ ಸ್ಪರ್ಧೆಯ ನಿಯಮಾವಳಿಗಳು :- ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡದವರಿಗೆ ಮೂರು ಪದಗಳನ್ನು ಹಾಡುವ ಅವಕಾಶವಿದ್ದು, ಮೂರೂ ಪದಗಳನ್ನು 18 ನಿಮಿಷಗಳಲ್ಲಿ ಹಾಡಬೇಕು. ಪ್ರತಿ ತಂಡದವರು ಎರಡು ಪದ್ಯಗಳನ್ನು ಕೈವಲ್ಯ ಸಾಹಿತ್ಯದ ಮೇಲೆ ಕಡ್ಡಾಯವಾಗಿ ಹಾಡಬೇಕು (ಕೈವಲ್ಯ ಸಾಹಿತ್ಯ ಎಂದರೆ ಶ್ರೀಮನ್ ನಿಜಗುಣ ಶಿವಯೋಗಿಗಳವರ, ಶ್ರೀ ಸರ್ಪಭೂಷಣ ಶಿವಯೋಗಿಳವರ, ಶ್ರೀ ಮಹಾಲಿಂಗರಂಗರ ಸಾಹಿತ್ಯಗಳು), ಪ್ರತಿ ತಂಡದವರು ಮೂರನೇ ಪದ್ಯವನ್ನು ಜಗದ್ಗುರು ಶ್ರೀ ಸಿದ್ಧಾರೂಢರ ಮೇಲಿನ ಪದ್ಯ, ದಾಸರ ಪದ್ಯ, ಶಿಶುನಾಳ ಶರೀಫರ ಪದ್ಯ ಹಾಗೂ ವಚನ ಸಾಹಿತ್ಯ ಇವುಗಳಲ್ಲಿ ಯಾವುದಾದರೊಂದು ಹಾಡಬಹುದು ಇಲ್ಲವೇ ಮೂರು ಪದ್ಯಗಳನ್ನು ಕೈವಲ್ಯ ಸಾಹಿತ್ಯದ ಮೇಲೆ ಹಾಡಬಹುದು. ಶ್ರೀ ಸಿದ್ಧಾರೂಢರ ಮೇಲಿನ ಪದ್ಯ, ದಾಸರ ಪದ್ಯ, ಶರೀಫರ ಪದ್ಯ ಹಾಡುವವರು ತಮ್ಮ ಹಾಡಿನ ಸಾಹಿತ್ಯದ ಒಂದು ಪ್ರತಿಯನ್ನು ನಿರ್ಣಾಯಕರ ಕಡೆ ಒಪ್ಪಿಸಿ ಹಾಡಬೇಕು. ತಾವು ಹಾಡುವ ಪದ್ಯದ ಹೆಸರು, ರಚಿಸಿದ ಕವಿಗಳ ಹೆಸರು, ರಾಗ, ತಾಳಗಳ ವಿವರವನ್ನು ಒಂದು ಹಾಳೆಯ ಮೇಲೆ ಬರೆದು ನಿರ್ಣಾಯಕರ ಕಡೆ ಕೊಟ್ಟು ಹಾಡಬೇಕು. ಜಾನಪದ ಹಾಗೂ ಸಿನೆಮಾ ಶೈಲಿಯಲ್ಲಿ ಹಾಡುವವರಿಗೆ ಅವಕಾಶ ನೀಡಲಾಗುವದಿಲ್ಲ. ಒಂದು ಸ್ಪರ್ಧೆಯಲ್ಲಿ ಭಾಗವಹಿಸುವ ತಂಡದ ಕಲಾವಿದರ ಸಂಖ್ಯೆ 6 ಕ್ಕಿಂತ ಕಡಿಮೆ ಇರಬಾರದು ಮತ್ತು 10 ಕ್ಕಿಂತ ಹೆಚ್ಚಿಗೆ ಇರಬಾರದು. ಒಂದು ತಂಡದಲ್ಲಿ ಭಾಗವಹಿಸಿದ ಕಲಾವಿದರಿಗೆ ಮತ್ತೊಂದು ತಂಡದಲ್ಲಿ ಹಾಡಲು ಅವಕಾಶ ಇರುವದಿಲ್ಲ. ಆದರೆ ತಬಲಾ ವಾದಕರಿಗೆ ಮಾತ್ರ ಕೇವಲ 2 ತಂಡಗಳಲ್ಲಿ ತಬಲಾ ಸಾಥ್ ನೀಡಲು ಅವಕಾಶ ನೀಡಲಾಗುವುದು. ಇನ್ನುಳಿದ ನಿಯಮಗಳನ್ನು ಸ್ಪರ್ಧೆಯ ಮುಂಚಿತವಾಗಿ ಸ್ಥಳದಲ್ಲಿಯೇ ಎಲ್ಲ ತಂಡದವರಿಗೆ ತಿಳಿಸಲಾಗುವುದು. ಸ್ಪರ್ಧೆಯ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಂದಲ್ಲಿ ನಿರ್ಣಾಯಕರ ಹಾಗೂ ಶ್ರೀ ಸಿದ್ಧಾರೂಢ ಸ್ವಾಮಿಯವರ ಟ್ರಸ್ಟ್ ಕಮೀಟಿಯ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಸಮಿತಿಯ ನಿರ್ಣಯವೇ ಅಂತಿಮ. ಇದರಲ್ಲಿ ಬೇರೆಯವರಿಗೆ ಅವಕಾಶ ಇರುವದಿಲ್ಲ.

ಮಹತ್ವದ ಸೂಚನೆ: ಪ್ರತಿ ದಿವಸ 25 ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುವದು 13ನೇ ತಾರಿಖಿನ ವರೆಗೆ ಪ್ರಥಮ ಸುತ್ತು ಜರುಗುವದು ಹಾಗೂ ಇದರಲ್ಲಿ ಆಯ್ಕೆಯಾದ ತಂಡಗಳಿಗೆ ಕೊನೆಯ ದಿನ 14ನೇ ತಾರಿಖಿನ ದಿನ ನಡೆಯುವ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವದು. ಅಂತಿಮ ಸುತ್ತಿನಲ್ಲಿ ಆಯ್ಕೆಯಾದ ತಂಡದವರಿಗೆ ಮಾತ್ರ ಮೇಲ್ಕಾಣಿಸಿದ ಬಹುಮಾನಗಳನ್ನು ನೀಡಲಾಗುವದು. ಸದರೀ ಬಹುಮಾನ ವಿತರಣಾ ಕಾರ್ಯಕ್ರಮವು ದಿನಾಂಕ:-15.04.2024 ರಂದು ಜರಗುವುದು ಎಂದು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶ್ರೀ ಶಾಮಾನಂದ ಬಿ. ಪೂಜೇರಿ ಅಧ್ಯಕ್ಷರು, ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಹಾಗೂ ಧರ್ಮದರ್ಶಿಗಳು, ಶ್ರೀ ಸಿದ್ದಾರೂಢ ಸ್ವಾಮಿಯವರ ಮಠ ಟ್ರಸ್ಟ್ . . . 9880169881,8095882033.


ಶ್ರೀ ಆತ್ಮನಂದ  ಸ್ವಾಮೀಜೀ ಯವರು,ಶಾಮಾನಂದ ಬಿ.ಪೂಜೇರಿ, ಅಧ್ಯಕ್ಷರು-ರಾಜ್ಯಮಟ್ಟದ ಭಜನಾ ಸ್ಪರ್ಧೆ ಸಮಿತಿ,ಬಸವರಾಜ ಸಿ. ಕಲ್ಯಾಣಶೆಟ್ಟರ -ಚೆರ್ಮನ್,ಮತ್ತು ಶಿವಕೀರ್ತಿ ಯವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

City Today News 9341997936