
6ನೇ ಆಗಸ್ಟ್ 2024ರಂದು ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿರವರ 103ನೇ ಆರಾಧನಾ ಮಹೋತ್ಸವ ಯಜಮಾನ್ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವ ನಡೆಯಲಿದೆ. ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯ ವ್ಯಕ್ತಿಗಳು, ಸಮುದಾಯದ ಹಿರಿಯರು ಭಾಗವಹಿಸುವರು. ಈ ಬಗ್ಗೆ ಮಾಹಿತಿ ನೀಡಲು ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ವತಿಯಿಂದ ಪತ್ರಿಕಾ ಗೋಷ್ಠಿ.
ಅಧ್ಯಕ್ಷರಾದ ಸುರೇಶ್ ಎಸ್. ಮತ್ತು ಆಡಳಿತ ಮಂಡಳಿಯ ಸದಸ್ಯರಾದ ವಿನೋದ್ ಎಂ.ಜಿ.. ವಿ.ಎಸ್.ಮಂಜುನಾಥ್, ನಿರಂಜನ್ ಗಾಣಿಗ.ಎನ್. ಮುನಿಚೆಟ್ಟಿ ವಿ. ಶ್ರೀಮತಿ ಉಮಾದೇವಿ ಜಿ.ಎ. ಶ್ರೀಮತಿ ಸ್ಪಪ್ನಚಂದ್ರಶೆಟ್ಟಿ, ರಾಜಣ್ಣ ಎಂ.ಸಿ. ಷಹ ಸಂಜಯ್, ಶ್ರೀಮತಿ ಕೃಷ್ಣವೇಣಿ ಡಿ.ಸಿ ರವರು ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.
ಶ್ರೀ ದೊಡ್ಡಣ್ಣ ಶೆಟ್ಟರವರ ಧಾರ್ಮಿಕ ಕಾರ್ಯ. ಬಡವರಿಗೆ ಉಚಿತ ಶಿಕ್ಷಣ, ಹಾಗೂ ಉಚಿತ ಊಟ. ವಸತಿ ನೀಡಿದ ಮಹಾನ್ ವ್ಯಕ್ತಿತ್ವದವರು.
ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ರವರ ಜೊತೆಯಲ್ಲಿ ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟರವರ ಉತ್ತಮ ಒಡನಾಟವಿತ್ತು. ದೊಡ್ಡಣ್ಣ ಶೆಟ್ಟರ ರವರ ಸಮಾಜ ಸೇವೆಯನ್ನು ಗುರುತಿಸಿ ಇವರಿಗೆ ಜನೋಪಕಾರಿ ಎಂಬ ಬಿರುದು ಕೊಟ್ಟು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ. ಮಹಾರಾಜರು ನೀಡಿದ 5.1/8 ಎಕರೆ ಜಾಗದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆ ಸ್ಥಾಪಿಸಿದರು.
1905ರಲ್ಲಿ ಕಲಾಸಿಪಾಳ್ಯದಲ್ಲಿ ಸಭಾಂಗಣ ಕಟ್ಟಡ ನಿರ್ಮಾಣ ಮಾಡಿದರು. ದೊಡ್ಡಣ್ಣ ಶೆಟ್ಟರವರ ಸಾಮಾಜಿಕ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಾಗಬೇಕು ಎಂಬುದು ಧರ್ಮ ಸಂಸ್ಥೆಯ ಉದ್ದೇಶವಾಗಿದೆ.
ಆಗಸ್ಟ್ 6ರಂದು ಶ್ರೀ ದೊಡ್ಡಣ್ಣಶೆಟ್ಟರವರ 103ನೇ ಆರಾಧನಾ ಮಹೋತ್ಸವವನ್ನು ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಬಯಲು ರಂಗಮಂದಿರದಲ್ಲಿ ಬೆಳಗ್ಗೆ 6 ಗಂಟೆಗೆ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯನ್ನು, ಸಂಸದರಾದ ಶ್ರೀ ತೇಜಸ್ವಿಸೂರ್ಯರವರು, ಶಾಸಕರಾದ ಡಾ: ಉದಯ ಸಿ ಗರುಡಾಚಾರ್ ರವರು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸಮುದಾಯದ ಎಲ್ಲಾ ಸಂಘ ಸಂಸ್ಥೆಯವರು ಹಿರಿಯ ಮುಖಂಡರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಶ್ರೀ ದೊಡ್ಡಣ್ಣ ಶೆಟ್ಟರ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿದ ಹಳೆಯ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಸ್.ಸುರೇಶ್ ಅಧ್ಯಕ್ಷರು, ಶ್ರೀ ಲ.ನ.ಧರ್ಮಸಂಸ್ಥೆ, ಕೋಟೆ, ಬೆಂಗಳೂರು. ತಿಳಿಸಿದರು.

ಸ್ಥಳ:ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಬಯಲು ರಂಗಮಂದಿರ.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆ. ಬೆಂಗಳೂರು -560002.
City Today News 9341997936

You must be logged in to post a comment.