“ಸಿಐಟಿಯು (CITU) ರಾಜ್ಯ ಸಮಿತಿಯಿಂದ ಪ್ರತಿಭಟನೆ” “ಶ್ರೀಮಂತರ ಮೇಲೆ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕು ಕಲ್ಪಿಸಿ” ಎಂಬ ಘೋಷಣೆಯೊಂದಿಗೆ ಮಾರ್ಚ್ 3 ರಿಂದ 7, 2025 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ

ಬೆಂಗಳೂರು, ಡಿಸೆಂಬರ್ 20, 2024: ಕರ್ನಾಟಕದಲ್ಲಿ ಕಾರ್ಮಿಕರ ಹಕ್ಕುಗಳು ಮತ್ತು ಜನಪರ ಆರ್ಥಿಕ ನೀತಿಗಳ ಜಾರಿಗೆ ಒತ್ತಾಯಿಸಿ, ಸಿಐಟಿಯು (CITU) ರಾಜ್ಯ ಸಮಿತಿ ಭಾರಿ ಪ್ರತಿಭಟನೆಯನ್ನು ಆಯೋಜಿಸಿದೆ. “ಶ್ರೀಮಂತರ ಮೇಲೆ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕು ಕಲ್ಪಿಸಿ” ಎಂಬ ಘೋಷಣೆಯೊಂದಿಗೆ ಮಾರ್ಚ್ 3 ರಿಂದ 7, 2025 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.

ರಾಜ್ಯದ ಕಾರ್ಮಿಕರ ಪ್ರಮುಖ ಬೇಡಿಕೆಗಳು

ರಾಜ್ಯದ ಕಾರ್ಮಿಕರ ಹಲವು ಬೇಡಿಕೆಗಳು ದೀರ್ಘಕಾಲದಿಂದ ಪ್ರಗತಿ ಕಾಣದೆ ಇರುವುದರಿಂದ, ಶ್ರಮಶಕ್ತಿಯ ಸಮರ್ಪಕ ನಿರ್ವಹಣೆ ಹಾಗೂ ಕಾರ್ಮಿಕರಿಗೆ ನ್ಯಾಯ ಒದಗಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಒತ್ತಾಯಿಸಿದೆ. ಸರ್ಕಾರವು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಅನುಸರಿಸುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಮಾರ್ಚ್ 3 ರಂದು ಗ್ರಾಮ ಪಂಚಾಯಿತಿ ಕಾರ್ಮಿಕರು, ಮಾರ್ಚ್ 4 ರಂದು ಅಕ್ಷರ ದಾಸೋಹ ಕಾರ್ಮಿಕರು, ಮಾರ್ಚ್ 5 ರಂದು ಕಟ್ಟಡ ನಿರ್ಮಾಣ ಕಾರ್ಮಿಕರು, ಮಾರ್ಚ್ 6 ರಂದು ಕಾರ್ಖಾನೆ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರು ಭಾಗವಹಿಸಲಿದ್ದಾರೆ. ಮಾರ್ಚ್ 7 ರಂದು ಅಂಗನವಾಡಿ ಕಾರ್ಮಿಕರು ಸೇರಿದಂತೆ ವಿವಿಧ ವೃತ್ತಿಗಳ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 50,000ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದೆ.

ಪ್ರತಿಭಟನೆಯಲ್ಲಿ ಕನಿಷ್ಠ ವೇತನ ಹೆಚ್ಚಳ, ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳು, ಸರ್ಕಾರಿ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನ್ಯಾಯ ಒದಗಿಸುವುದು ಸೇರಿ 37 ಬೇಡಿಕೆಗಳನ್ನು ಪ್ರಸ್ತಾಪಿಸಲಾಗಿದೆ.

ಸರ್ಕಾರದ ಕಾರ್ಮಿಕ ನೀತಿಯ ವಿರೋಧ

ಸಿಐಟಿಯು ರಾಜ್ಯ ಸಮಿತಿಯು ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ಜಾರಿಗೆ ತಂದ ಕಾರ್ಮಿಕ ಕಾನೂನು ತಿದ್ದುಪಡಿಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಕೂಡ ಮುಂದುವರಿಸುತ್ತಿದೆ ಎಂದು ಆರೋಪಿಸಿದೆ. ಕೃಷಿ ಕ್ಷೇತ್ರದಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಹಿಂಪಡೆಯದೆ, ಜನತೆಗೆ ನೀಡಿದ ಭರವಸೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಸಂಘಟನೆ ಹೇಳಿದ್ದಾರೆ.

ರಾಜ್ಯ ಸರ್ಕಾರ ಕಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿರುವುದರಿಂದ, ಬಜೆಟ್ ಪೂರ್ವ ಚರ್ಚೆಗಳಲ್ಲೂ ಕಾರ್ಮಿಕರ ಸಮಸ್ಯೆಗಳಿಗೆ ತಕ್ಕ ಪ್ರತಿಕ್ರಿಯೆ ದೊರಕದೆ ಇರುವುದರಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಕಟಣೆ ನೀಡಿದೆ. ಸರ್ಕಾರ ಪ್ರಜಾಸತ್ತಾತ್ಮಕ ತತ್ವಗಳನ್ನು ಪಾಲಿಸಬೇಕಾದರೆ, ಬಜೆಟ್ ಪ್ರಸ್ತಾವನೆಗಳಲ್ಲಿ ಈ ಬೇಡಿಕೆಗಳ ಕುರಿತು ಸ್ಪಷ್ಟ ಘೋಷಣೆ ಮಾಡಬೇಕು ಎಂದು ಸಮಿತಿಯು ಆಗ್ರಹಿಸಿದೆ.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷರಾದ ಎಸ್. ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿಗಳಾದ ಮೀನಾಕ್ಷಿ ಸುಂದರಂ, ಎಚ್.ಎಸ್. ಸುನಂದಾ ಮತ್ತು ಮಾಲಿನಿ ಮೇಸ್ತ ಉಪಸ್ಥಿತರಿದ್ದರು.

City Today News 9341997936

ಬೆಂಗಳೂರು ವಕೀಲರ ಸಂಘ ಚುನಾವಣೆಯಲ್ಲಿ ಎಸ್.ಸಿ./ಎಸ್.ಟಿ. ಮತ್ತು ಮಹಿಳಾ ವಕೀಲರಿಗೆ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಕೀಲರ ಸಂಘವು ಪ್ರಕಟಿಸಿದಂತೆ, ಬೆಂಗಳೂರಿನ ಪ್ರತಿಷ್ಠಿತ ವಕೀಲರ ಸಂಘದಲ್ಲಿ ಎಸ್.ಸಿ./ಎಸ್.ಟಿ. ಹಾಗೂ ಮಹಿಳಾ ವಕೀಲರಿಗೆ ಸೂಕ್ತ ಮೀಸಲಾತಿ ನೀಡಬೇಕು ಎಂಬ ಆಗ್ರಹವನ್ನು ಮುನ್ನಿರಿಸಲಾಗಿದೆ. ಈ ಸಂಬಂಧ ಸಂಘದ ಪದಾಧಿಕಾರಿಗಳು ನಗರದ ಪತ್ರಿಕಾ ಗೋಷ್ಠಿಯಲ್ಲಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಬೆಂಗಳೂರು ವಕೀಲರ ಸಂಘವು ದೇಶದ ಅತಿದೊಡ್ಡ ವಕೀಲರ ಸಂಘಗಳಲ್ಲಿ ಒಂದಾಗಿದ್ದು, ಸುಮಾರು 25,000 ವಕೀಲರ ಸದಸ್ಯತ್ವ ಹೊಂದಿದೆ. ಸಂಘವು ಸರ್ಕಾರದಿಂದ ವಿವಿಧ ಹಣಕಾಸು ಅನುದಾನಗಳನ್ನು ಪಡೆಯುತ್ತಾ ಬರುತ್ತಿದ್ದು, ಸಂಘದ 2025-2028 ಸಾಲಿನ ಚುನಾವಣೆಯು ಫೆಬ್ರವರಿ 16, 2025 ರಂದು ನಡೆಯಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಮುನಿಯಪ್ಪ ಅವರು, “ಸಂಘದಲ್ಲಿ ಸುಮಾರು 7000-8000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರು ಇದ್ದರೂ, ಅವರಿಗಾಗಿ ಯಾವುದೇ ಮೀಸಲಾತಿ ವ್ಯವಸ್ಥೆ ಕಲ್ಪಿಸಿಲ್ಲ. ಇದು ಅತ್ಯಂತ ವಿಷಾದನೀಯ” ಎಂದು ತಿಳಿಸಿದ್ದಾರೆ.

ಅವರು ಮುಂದುವರೆದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಕಲ್ಪಿಸುವ ಕುರಿತಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಕೀಲರ ಸಂಘವು ಡಬ್ಲ್ಯೂಪಿ ನಂ. 3071/2025 ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅದರ ಆಧಾರದಲ್ಲಿ ನ್ಯಾಯಾಲಯವು ಎಸ್.ಸಿ./ಎಸ್.ಟಿ. ವಕೀಲರಿಗೆ ಸಂಘದಲ್ಲಿ ಮೀಸಲಾತಿ ಕಲ್ಪಿಸುವಂತೆ ಸೂಚನೆ ನೀಡಿದೆ ಎಂದು ಹೇಳಿದರು.

ಇದೇ ವೇಳೆ ಮಹಿಳಾ ವಕೀಲರಿಗೆ 30% ಮೀಸಲಾತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಎಸ್.ಎಲ್.ಪಿ(ಸಿ)1404/2025 ಪ್ರಕರಣದಲ್ಲಿ ನಿರ್ದೇಶನ ನೀಡಿದ ತೀರ್ಪನ್ನು ಉಲ್ಲೇಖಿಸಿದರು.

ಸಂಘದ ಅಧ್ಯಕ್ಷರಾದ ಎಂ. ಮುನಿಯಪ್ಪ, ಖಜಾಂಚಿ ಟಿ.ಎಲ್. ನಾಗರಾಜ್, ಮುಖಂಡರುಗಳಾದ ಗೋಪಾಲ್,ಮಂಜುಳಾ, ಕೃಷ್ಣಪ್ಪ , ಮತ್ತು ರಘು ಉಪಸ್ಥಿತರಿದ್ದು, “2025-2028 ನೇ ಸಾಲಿನ ಚುನಾವಣೆಗಳಲ್ಲಿ ಎಸ್.ಸಿ./ಎಸ್.ಟಿ. ವಕೀಲರಿಗೆ ನ್ಯಾಯಸಮ್ಮತ ಮೀಸಲಾತಿ ಕಲ್ಪಿಸದಿದ್ದರೆ, ವಿಸ್ತೃತ ಹೋರಾಟಕ್ಕೆ ಮುಂದಾಗಲಾಗುವುದು” ಎಂದು ಎಚ್ಚರಿಕೆ ನೀಡಿದರು.

City Today News 9341997936

ಇಂಧನ ಇಲಾಖೆಯಲ್ಲಿ ಪ್ರಾಣಾಪಾಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ರಾಜ್ಯದಲ್ಲಿರುವ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಹೊರ ಗುತ್ತಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಬೃಹತ್ ಪ್ರತಿಭಟನೆ.

ಈಗಾಗಲೇ 2023 ಆಗಸ್ಟ್ ತಿಂಗಳಿನಲ್ಲಿ ಸತತ ಐದು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆದು ಮಾನ್ಯ ಇಂಧನ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದ್ದೆವು. ನಮ್ಮ ಮನವಿಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ಹಂತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಹೇಳಿ ನಮ್ಮ ಹೋರಾಟವನ್ನು ಹಿಂಪಡೆಯಲು ಮನವೊಲಿಸಿದ್ದರು. ಅದರಂತೆ ನಾವು ಒಂದು ವರ್ಷ ನಾಲ್ಕು ತಿಂಗಳು ಕಾಲ ಕಾಯ್ದರೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಮತ್ತು ಇಂಧನ ಇಲಾಖೆಯ ವಿರುದ್ಧ ಪ್ರಾಣಪಾಯದಲ್ಲಿ ಕೆಲಸ ಮಾಡುತ್ತಿರುವ ಸ್ಟೇಷನ್ ಅಪರೇಟರ್ಸ್, ಸ್ಟೇಷನ್ ಹೆಲ್ವರ್ಸ್‌, ಗ್ಯಾಂಗ್ ಮ್ಯಾನ್, ಮೀಟರ್ ರೀಡರ್ಸ್ ಮತ್ತು ಚಾಲಕರು ಹಾಗು ಮತ್ತಿತರರ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಿನಾಂಕ: 28/01/2025 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರ ಹಿತರಕ್ಷಣಾ ವೇದಿಕೆ ಹಾಗು ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ನಿರ್ಣಯ ಕೈಗೊಂಡಿರುತ್ತೇವೆ ಈ ಪ್ರತಿಭಟನೆಗೆ ವಿವಿಜಿ ಮಾಡಿಕೊಡದೆ ಸರ್ಕಾರ ಮತ್ತು ಇಂದನ ಇಲಾಖೆ ಇದೇ ತಿಂಗಳು 27 ರ ಒಳಗೆ  ಹಾಕಿರುವ ಹೊರ ಗುತ್ತಿಗೆ ನೌಕರರನ್ನು ಮರು ನೇಮಕ ಮಾಡಬೇಕು ಎಂದು ತಮ್ಮ More ಮಾಧ್ಯಮಗಳ ಮುಖೇನವಾಗಿ ಸರ್ಕಾರವನ್ನು ವಿನಂತಿಸುತ್ತೇವೆ. ಒಂದು ವೇಳೆ ಗಡುವು ನೀಡಿರುವ ದಿನಾಂಕದ ಒಳಗೆ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗೆ ನಿಗದಿ ಮಾಡಿರುವ ದಿನಾಂಕದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೌಕರರು ರಾಜ್ಯದ ಎಲ್ಲಾ ವಿಧ್ಯುತ್ ಉಪ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಮ್ಮ ಕುಟುಂಬ ಸಮೇತವಾಗಿ ಪ್ರತಿಭಟನೆಗೆ ಮುಂದಾಗುತ್ತೇವೆಂದು ನಿಮ್ಮ ಮಾಧ್ಯಮದ ಮೂಲಕ ಸರ್ಕಾರಕ್ಕೆ ತಿಳಿಸ ಬಯಸುತ್ತೇವೆ ಎಂದು ಕರ್ನಾಟಕ ರಾಜ್ಯ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ (ರಿ) ವತಿಯಿಂದ ತಿಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷರಾದ ಮೇಲುಕೋಟೆ ಬೆಟ್ಟಸ್ವಾಮಿ ಗೌಡ, ರಾಜ್ಯಾಧ್ಯಕ್ಷರಾದ ಲೀಲಾಸಾಗರ್ ಎಂ ಎಸ್, ರಾಜ್ಯ ಉಪಾಧ್ಯಕ್ಷರಾದ ಪರಶುರಾಮ್ ರಾಥೋಡ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಾಗಪ್ಪ ಭಾವಿಕಟ್ಟಿ, ರಾಘವೇಂದ್ರ ಉರಣಕರ್, ಮಂಜುನಾಥ್ ಹಾದಿಮುನಿ, ಜಿನೇಂದ್ರ ಕುಮಾರ್ ಬಿ ಪಿ, ಅರ್ಜುನ್ ಗಾಣಿಗೇರ, ಮನೋಹರ್ ಸಿ ಹೆಚ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮಲ್ಲೇಶ್ ಬಿ ಜಿ ಹಾಗು ರಾಜ್ಯ ಕಮಿಟಿ ಮತ್ತು ಜಿಲ್ಲಾ ಕಮಿಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

City Today News 9341997936

ರಾಜ್ಯಾದ್ಯಂತ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣೆ ಸಾವು ಹಾಗೂ ಆರೋಗ್ಯ ಇಲಾಖಾ ಸಚಿವರ ಮತ್ತು ಅಧಿಕಾರಿಗಳ ಬೇಜವಾಬ್ದಾರಿ ನಡವಳಿಕೆಗಳಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಜನತಾ ಪಕ್ಷದ ವತಿಯಿಂದ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಡಾ.ವಾಣಿ ಎನ್ ಶೆಟ್ಟಿ ರವರ ನೇತೃತ್ವದಲ್ಲಿ  ಪತ್ರಿಕಾಗೋಷ್ಠಿ


ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ನಡವಳಿಕೆಯಿಂದಾಗಿ ಹಾಗೂ ಹಿಂದಿನ ಅವಧಿಯಲ್ಲಿ ಅಧಿಕಾರದಲ್ಲಿದ್ದ ಭಾರತೀಯ ಜನತಾಪಕ್ಷದ ಹೊಣೆಗೇಡಿ ನೀತಿಯಿಂದಾಗಿ ಆರೋಗ್ಯ ಇಲಾಖೆ ಸೇರಿದಂತೆ ಇಡೀ ಆಡಳಿತದೇ ಅವ್ಯವಸ್ಥೆಯ ತಾಣವಾಗಿರುವುದು ನಾಚಿಕೆಗೇಡಿನ ವಿಷಯ ಪ್ರಸ್ತುತ ವೈದ್ಯರ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ವಾಣಂತಿಯರ ಸಾವುಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕಂಗಾಲಾಗಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳನ್ನು ಗಮನಿಸಿದರೆ ನಾಡಿನ ಜನರ ಆರೋಗ್ಯದ ಬಗ್ಗೆ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಮತ್ತು ನಾಡಿನ ಸಾಕ್ಷಿಪ್ರಶ್ನೆಗಳಿಗೆ ಕಾಳಜಿಯೇ ಇಲ್ಲದಂತಾಗಿದೆ. ಸರ್ಕಾರದ ವಿರೋಧಾಭಾಸದ

ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಸಾವಿಗೀಡಾಗುತ್ತಿರುವ ಅಸಂಖ್ಯಾತ ಬಾಣಂತಿಯರು ಒಂದೆಡೆಯಾದರೆ, ಮತ್ತೊಂದೆಡೆ ನವಣಾತ ಶಿಶುಗಳ ದಾರುಣ ಸಾವು ನಿರಂತರವಾಗಿದೆ. ಸರಣಿ ದುರ್ಘಟನೆಗಳು ಕಣ್ಣೆದುರಿಗೆ ಇದ್ದರೂ ಮಾನ್ಯ ಆರೋಗ್ಯ ಸಚಿವರು “ನನ್ನ ತಪ್ಪಿದ್ದರೆ ರಾಜೀನಾಮೆಗೆ ಸಿದ್ದ” ಎಂಬ ಬೇಜಾವಾಬ್ದಾರಿ ಹೇಳಿಕೆ ನೀಡಿ ಅನುಕಂಪ ಗಿಟ್ಟಿಸಿಕೊಳ್ಳಲು ನೋಡುತ್ತಿದ್ದಾರೆ. ಮುಂದುವರೆದು ಸದರಿ ಸಚಿವರು “ಗ್ಲೋಕೋಸ್ ಕಾರಣವಾಗಿದ್ದರೆ ಕಂಪೆನಿಗಳ ಮೇಲೆ ಕ್ರಮ” ಎಂದಿದ್ದಾರೆ. ಕಳಪೆ ಗುಣಮಟ್ಟದ ಉಪಕರಣಗಳನ್ನು ಸರಬರಾಜು ಮಾಡಿದ ಕಂಪೆನಿಗಳ ಜೊತೆಗೆ, ಸದರಿ ಔಷಧಿಗಳನ್ನು ನಿಯಮಾನು ಅನುಸಾರ ಪರೀಕ್ಷಿಸದೆ ಉಪಯೋಗಿಸಿದ ವೈದ್ಯಕೀಯ ಸಿಬ್ಬರಿ ಬ್ಬಂದಿಗಳ ವಿರುದ್ದವೂ ಸ್ವವೂ ಕ್ರಮ ಜರುಗಿಸುವ మాడుతారు? ಧೈದ್ಯವನ್ನು ಮಾನ್ಯ ಆರೋಗ್ಯ ಸಚಿವರು ಮಾಡ

ಸರಣಿ ದುರ್ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ “ಸಿ.ಎಂ. ಸಿಡಿಮಿಡಿ” ಎಂಬ 327 meoãost మర గావు ఎం చిత్తివాగుడే బుద్ద: ತಕ್ಷಣವೇ ಪ್ರಕಾರ ಎಂದಿದ್ದರೂ, ದಿನೂರನ್ನೂ ದಾಟರುವ ಸಾಧ್ಯತೆಯಿದೆ. ಮೊದಲಿನ ಒಂದೆರೆಡು ಪ್ರಕರಣಗಳು ವರದಿಯಾದ ಸಚಿವರುಗಳು ಮತ್ತು ಅಧಿಕಾರಿಗಲು ಎಚ್ಚರಿಕೆ ವ ವಹಿಸಿದ್ದರೆ, ಇಷ್ಟೊಂದು ಪ್ರಮ ಮಾಣದ ಹೊಣೆಯಾಗಬೇಕಿದೆ. ಈ ಅಂಕಿ- ನೋವನ್ನು ತಪ್ಪಿಸಬಹುದಿತ್ತು. ಇಷ್ಟೊಂದು ಸಾವುಗ ವುಗಳಿಗೆ ಸರ್ಕಾರವೇ ಹೆ ಅಂಶಗಳು . ತಾಯ್ತನದ ಮಹಿಳೆಯ ು ರಲ್ಲಿ ಆತಂಕವನ್ನುಂಟುಮಾಡಿದೆ. ಂಬ ಬಾಲಿಶ ವರದಿಗಳು

ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಸಚಿವೆಯವರು “ಇಲಾಖಾ ತನಿಖೆಗೆ ಆದೇಶಿಸಲಾಗಿವೆ” ಎಂಬ ತಿಪ್ಪೇಸಾರಿಸುವ ಹೇಳಿಕೆ ನೀಡಿದ್ದಾರೆ. ರೆ. ಇವರದೇ ಆಡಳಿತದಲ್ಲಿ ಆಗಿರುವ ದಗಳಿಗೆ ಇವರೇ ಪ್ರಮಾದಗ ನೇಮಿಸಿದ ತನಿಖಾ ತಂಡದಿಂದ ಇಸ ಇವರದೇ ‘ಕರ್ತವ್ಯಲೋಪದ ಬಗ್ಗೆ ಯಾವ ಅಧಿಕಾರಿಂ ಕಾರಿಯಾದರೂ ಸತ್ಯಾ ಸತ್ಯಾಂಶದ ವರದಿ ನೀಡಲು ಸಾಧ್ಯವೇ? ಸಾರ್ವಜನಿಕರನ್ನು ದಾರಿತಪ್ಪಿಸುವ ಹೇಳಿಕೆ ಇದಾಗಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮವೂ ಜರುಗುವುದಿಲ್ಲ ಎಂಬುದು ಸಾಮಾನ್ಯಜ್ಞಾನ ಇರುವ ಯಾರಿಗಾದರೂ ಅರ್ಥವಾಗುತ್ತದೆ.

ಹೊಣೆಗೇಡಿ ಸರ್ಕಾರವು ನಾಮಕೇವಾಸ್ತೆ ನೇಮಿಸಿರುವ ಐಎಎಸ್ ಅಧಿಕಾರಿಯಿಂದ ಬಾರದರ್ಶಕ ತನಿಖೆ ಅಸಾಧ್ಯ. ಇಂತಹ ಗಂಭೀರ ಪ್ರಕರಣಗಳ ತನಿಖೆ ನಡೆಸಬೇಕಾದವರು ವೈದ್ಯಕೀಯ ವಿಜ್ಞಾನದಲ್ಲಿ ವಿಶೇಷವಾಗಿ ಸ್ತ್ರೀರೋಗ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞರಾಗಿರಬೇಕು. ಹೀಗಾಗಿ ಸದರಿ ತನಿಖಾ ತಂಡದ ಸೇಮಕಾತಿಯ ಕಣ್ಣೂರೆಸುವ ತಂತ್ರವಾಗಿದೆ. ಇದರಿಂದಾಗಿ ಸಮಯ ಹಾಗೂ ದೊಕ್ಕಸಕ್ಕೆ ಮತ್ತಷ್ಟು ಹಾನಿಯೇ ಹೊರತು ಯಾವುದೇ ಸತ್ಯಾಂಶವೂ ಹೊರಬರುವುದಿಲ್ಲ ಮತ್ತು ತಪ್ಪಿತಸ್ಥರ ಬಗ್ಗೆಯೂ ಜಗತ್ತಿಗೆ ತಿಳಿಯುವುದಿಲ್ಲ,

ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಘೋಷಿಸಿರುವ ರೂ.5 ಲಕ್ಷಗಳ ಪರಿಹಾರವಂತೂ ಅವೈಜ್ಞಾನಿಕ, ಅಸಂಬದ್ಧ, ಅತಾರ್ಕಿಕ ತೀರ್ಮಾನವಾಗಿದೆ. ಇದರಿಂದಾಗಿ ಪರಿಹಾರ ವಿತರಣೆಯಲ್ಲೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಬಾಣಂತಿಯರ ಮತ್ತು ನವಜಾತ ಶಿಶುಗಳ ಜೀವಕ್ಕೆ ಸರ್ಕಾರವೇ ಬೆಲೆ ಕಟ್ಟಿದಂತಾಗುತ್ತದೆ. ಅಸಂಬದ್ದ ಪದ್ಧತಿಯನ್ನು ಹುಟ್ಟುಹಾಕಿದಂತೆ.

ವಿರೋಧಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಇಲ್ಲಿಯೂ ಆಡಳಿತ ಪಕ್ಷದವರು ತಮಗೆ ಅನುಕೂಲವಾಗುವಂತಹ ನಿವೃತ್ತ ವ್ಯಕ್ತಿಗಳನ್ನೇ ನೇಮಿಸುವುದು, ತಿಪ್ಪೆಸಾರಿಸುವುದು. ವರದಿಯ ಅನುಷ್ಠಾನವಾಗದೆ ಕ್ರಮೇಣ ಪ್ರಕರಣಗಳು ಮುಚ್ಚಿಹೋಗಿರುವುದನ್ನು ನೋಡಿದ್ದೇವೆ. ಹಾಗಾಗಿ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಮಾತ್ರವೇ ತನಿಖೆ ನಡೆಸಬೇಕೆಂದು ಜನತಾಪಕ್ಷವು ಆಗ್ರಹಿಸುತ್ತದೆ.

ಇವೆಲ್ಲದರ ಪರಿಣಾಮವಾಗಿ ಬಡಬಗ್ಗರು ಸರ್ಕಾರಿ ಆಸ್ಪತ್ರೆಗಳನ್ನು ಸಾವಿನ ಮನೆಗಳನ್ನು ಕಂಡಂತೆ ಭಯಭೀತರಾಗಿದ್ದಾರೆ. ಪರೋಕ್ಷವಾಗಿ ಸಾಲ-ಸೋಲ ಮಾಡಿ ದುಬಾರಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಹ ಅನಿವಾರ್ಯ ವಾತಾವರಣವನ್ನು ಸರ್ಕಾರವೇ ಸೃಷ್ಟಿಸುತ್ತಿರುವ ಅನುಮಾನ ಸಾರ್ವಜನಿರನ್ನು ಕಾಡುತ್ತಿದೆ. ಒಟ್ಟಾರೆ ಪ್ರಸ್ತುತ ಸರ್ಕಾರ ಮತ್ತು ಸರ್ಕಾರಿ ಆಸ್ಪತ್ರೆಗಳು ಬಡವರ ಪರವಾಗಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಘಟಿಸುತ್ತಿರುವ ಬಾಣಂತಿಯರ ಸಾವು, ನವಜಾತ ಶಿಶುಗಳ ಸಾವು ಒಳಗೊಂಡಂತೆ ಸಮಸ್ತ ಆರೋಗ್ಯ ಇಲಾಖೆಗೇ ಮೇಜರ್ ಸರ್ಜರಿಯ ಅಗತ್ಯವಿದೆ.

ಸದರಿ ಪ್ರಕರಣಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಆಯೋಗದಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜನತಾಪಕ್ಷವು ಕೆಳಕಂಡ ಪದಾಧಿಕಾರಿಗಳ ನೇತೃತ್ವದಲ್ಲಿ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಡಾ.ವಾಣಿ ಎನ್ ಶೆಟ್ಟಿ ರವರ ನೇತೃತ್ವದಲ್ಲಿ ನಾಗೇಶ್.ಎನ್,ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ, ಶ್ರೀಮತಿ ಕನ್ಯಾ ಭೂಷಣ್ :ನಿವೃತ್ತ ಶಿಕ್ಷಕಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರು, ಮಹಿಳಾ ಘಟಕ, ಶ್ರೀಮತಿ ಸುನಂದ: ನಿವೃತ್ತ ಶಿಕ್ಷಕಿ ಹಾಗೂ ರಾಜ್ಯ ಉಪಾಧ್ಯಕ್ಷರು, ಮಹಿಳಾ ಘಟಕ, ಶ್ರೀಮತಿ ಸ್ನೇಹ: ರಾಜ್ಯ ಪ್ರಧಾನ ಕಾರ್ಯದರ್ಶಿ, ಮಹಿಳಾ ಘಟಕ, ಶ್ರೀ ದಿಲೀಪ್‌ ಕುಮಾರ್: ರಾಜ್ಯ ಕಾರ್ಯದರ್ಶಿ ಹಾಗೂ ಶ್ರೀ ಎ.ರಾಜ್: ಬೆಂಗಳೂರು ನಗರ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು .

City Today News 9341997936

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಏಜೆನ್ಸಿಗಳ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಆಧಾರದ ನೌಕರಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಹಾಗೂ ಪ್ರತಿ ತಿಂಗಳು ನಿಗಧಿತ ಸಮಯಕ್ಕೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು.

1) ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸದೆ ದಲಿತರ ಅಭಿವೃದ್ಧಿಗಾಗಿ ಬಳಸಬೇಕು ಹಾಗೂ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಈಗಾಗಲೇ ಅನ್ಯ ಯೋಜನೆಗಳಿಗೆ ಬಳಸಿರುವ ಅನುದಾನವನ್ನು ಕೂಡಲೇ ವಾಪಸ್ಸು ತರಬೇಕು.

2) ರಾಜ್ಯದಲ್ಲಿ ಈಗಾಗಲೇ ದಲಿತರ ಮೇಲಿನ ದೌರ್ಜನ್ಯ ತಡೆಯುವ ಸಲುವಾಗಿ 33 ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಲು ಆದೇಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿರಂತರವಾಗಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಧಿಕಾರಿಗಳು / ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಬೇಕು.

3) ತೋಟಿ/ತಳವಾರು ಜಮೀನು ಕುಲವಾಡಿ ಜಮೀನು ರದ್ದಿಯಾತಿ ಕಾಯ್ದೆ 1961 (Village Officer Abolition Act 1961) ಅಡಿ ಭೂಮಿ ಮಂಜೂರಾತಿದಾರರನ್ನು ಪಿಟಿಸಿಎಲ್ ಕಾಯ್ದೆ ಸೆಕ್ಷನ್ 3(1) (ಬಿ) ವ್ಯಾಪ್ತಿಗೆ ಸೇರಿಸಿ ಸದರಿ ಪಿಟಿಸಿಎಲ್ ಕಾಯ್ದೆಗೆ ರಾಜ್ಯ ಸರ್ಕಾರವು ತಿದ್ದುಪಡಿ ತಂದು ದಲಿತರ ಜಮೀನು ಉಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.

4) ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೋಟೆಕೆರೆ ಮಧ್ಯ ಭಾಗದಲ್ಲಿ 100 ಅಡಿಯ ಭಗವಾನ್ ಬುದ್ಧರ ಪ್ರತಿಮೆಯನ್ನು ಕೂಡಲೇ ಅನಾವರಣಗೊಳಿಸಬೇಕು ಹಾಗೂ ಚಿಕ್ಕೋಡಿ ತಾಲ್ಲೂಕಿನ ಮುಗಳಿ ಗ್ರಾಮದಿಂದ ಮಸೂದೆ ತೋಟಕ್ಕೆ ರಸ್ತೆ ಅನುಕೂಲ ಮಾಡಿಕೊಡಬೇಕು.

5) ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಏಜೆನ್ಸಿಗಳ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಆಧಾರದ ನೌಕರಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಹಾಗೂ ಪ್ರತಿ ತಿಂಗಳು ನಿಗಧಿತ ಸಮಯಕ್ಕೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು.

6) ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಪ್ರಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಕೂಡಲೇ ಒಳ ಮೀಸಲಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. 1

7) ಬಾಗಲಕೋಟೆ ನಗರದ ಸರ್ವೆ ನಂ.131 ರ 4ಎ-27 ಗುಂಟೆ ಸರ್ಕಾರಿ ಜಾಗದಲ್ಲಿ ಭಗವಾನ್ ಬುದ್ಧರ ವಿಹಾರ ನಿರ್ಮಿಸಿದ್ದು ಸದರಿ ಜಮೀನನ್ನು ಬುದ್ಧವಿಹಾರ ನಿರ್ಮಾಣ ಸಮಿತಿಗೆ ಮಂಜೂರು ಮಾಡಬೇಕು ಹಾಗೂ ಭಗವಾನ್ ಬುದ್ಧರ ಜಯಂತಿಗೆ ಸರ್ಕಾರಿ ರಜೆ ಘೋಷನೆ ಮಾಡಬೇಕು.

8) ಪ್ರತಿ ತಿಂಗಳ 2ನೇ ಭಾನುವಾರ ರಾಜ್ಯದ ಎಲ್ಲಾ ಪೊಲೀಸ ಠಾಣೆಗಳಲ್ಲಿಯೂ “ದಲಿತ ಸಭೆ” ನಡೆಸಲು ಆದೇಶವಿದ್ದು, ಇತ್ತೀಚೆಗೆ ಎಲ್ಲಿಯೂ ಸರಿಯಾಗಿ ದಲಿತರ ಕುಂದು ಕೊರತೆ ಸಭೆಗಳಾಗುತ್ತಿಲ್ಲ, ಆದ್ದರಿಂದ ನಿರಂತರವಾಗಿ ದಲಿತ ಸಭೆ ನಡೆಸಲು ನಿರಾಶಕ್ತಿ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

9) ಕೋಲಾರ ಜಿಲ್ಲೆ ಕೋಲಾರ ತಾಲ್ಲೂಕು, ಸುಗಟೂರು ಹೋಬಳಿ ನಾಗನಾಳ ಗ್ರಾಮದ ಗೋಮಾಳ ಸರ್ವೆ ನಂ.42 ರಲ್ಲಿ ಸೋಮಶೇಖರ್ ಬಿನ್ ಲೇಟ್ ನಾರಾಯಣಗೌಡ ರವರಿಗೆ ಮಂಜೂರಾಗಿರುವ ಕ್ವಾರಿ ಮತ್ತು ಜೆಲ್ಲಿ ಕ್ರಷರ್ ಹಾಗೂ ವೇಮಗಲ್ ಹೋಬಳಿ, ಮೇಡಿಹಾಳ ಗ್ರಾಮದ ಗೋಮಾಳ ಸರ್ವೆ ನಂ.24 ರಲ್ಲಿ ಹಾಗೂ ದನಮಟ್ಟಹಳ್ಳಿ ಗೋಮಾಳ ಸರ್ವೆ ನಂ.53 ರಲ್ಲಿ ಸೊಣ್ಣೆಗೌಡ ಬಿನ್ ಚೌಡೇಗೌಡ ರವರಿಗೆ ಮಂಜೂರಾಗಿರುವ ಕ್ವಾರಿ ಮತ್ತು ಜೆಲ್ಲಿಕ್ರಷರ್ ಪರವಾನಗಿಗಳನ್ನು ಗ್ರಾಮಸ್ಥರ/ರೈತರ ಹಿತ ದೃಷ್ಠಿಯಿಂದ ಸರ್ಕಾರ ಕೂಡಲೇ ರದ್ದುಗೊಳಿಸಬೇಕು ಮತ್ತು ಗಣಿದಣಿಗಳ ಜೊತೆ ಶಾಮೀಲಾಗಿ ಕರ್ತವ್ಯ ಲೋಪವೆಸಗಿ ರೈತರ ಜೀವನದ ಜೊತೆ ಚೆಲ್ಲಾಟವಾಡುವ ಸಂಬಂಧಪಟ್ಟಿ ಅಧಿಕಾರಿಗಳ ಮೇಲೆಸೂಕ್ತ ಕಾನೂನು ಕ್ರಮ ಜರುಗಿಸಬೇಕು.

10) ಉಚಿತ ಮತ್ತು ಕಡ್ಡಾಯ ಶಿಕ್ಷಣ (ಆರ್‌ಟಿಇ) 2006 ರಲ್ಲಿ ಜಾರಿಗೆ ಬಂದಿರುತ್ತದೆ. ಆದರೆ ಬಲಾಡ್ಯರ ಒತ್ತಾಯಕ್ಕೆ ಮಣಿದು ಸರ್ಕಾರಿ ಶಾಲೆಗಳ ಸಮೀಪ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಆರ್.ಟಿ.ಇ ಪ್ರವೇಶಕ್ಕೆ ಅವಕಾಶವಿಲ್ಲದೆ ಇರುವುದರಿಂದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಪಿ.ಯು.ಸಿ ವರೆಗೆ ವಿಸ್ತರಿಸಬೇಕು.

11) ರಾಯಚೂರು ಜಿಲ್ಲೆಗೆ ಎಐಎಂಎಸ್ ಕೂಡಲೇ ಜಾರಿಗೊಳಿಸಬೇಕು.

12) ರಾಜ್ಯದ ವಿವಿಧ ನಿಗಮಗಳಲ್ಲಿ ಸಾಲ ಪಡೆಯಬೇಕಾದರೆ ಸ್ಥಳೀಯ ಶಾಸಕರ ಶಿಫಾರಸ್ಸು ಪತ್ರ ಬೇಕಾಗಿರುವುದರಿಂದ ನಿಜವಾದ ಬಡವರಿಗೆ ಸೌಲಭ್ಯ ಸಿಗುವುದಿಲ್ಲ. ಆದ್ದರಿಂದ ಕೂಡಲೇ ಸರ್ಕಾರ ಶಾಸಕರ ಶಿಫಾರಸ್ಸು ಪತ್ರವನ್ನು ರದ್ದುಪಡಿಸಬೇಕು.

13) ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗೆ ಮೀಸಲಿಟ್ಟಿರುವ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸುತ್ತಿದ್ದಾರೆ. ಕೂಡಲೇ ದಲಿತರಿಗೆ ಮೀಸಲಿಟ್ಟಿರುವ 24/% ಹಣವನ್ನು ದಲಿತರ ಅಭಿವೃದ್ಧಿಗೆ ಬಳಸಬೇಕು ಹಾಗೂ ದಲಿತರಿಗೆ ಸ್ಮಶಾನ ಭೂಮಿಯನ್ನು ಖರೀದಿಸಿ ಅದರ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಬೇಕು.

14) ಪಂಚಾಯ್ತಿಗಳಲ್ಲಿ ಕೆಲಸ ಮಾಡುತ್ತಿರುವ ಪಿಡಿಒ ಗಳು ಒಂದೇ ಪಂಚಾಯ್ತಿಗಳಲ್ಲಿ 10-12 ವರ್ಷಗಳ ಕಾಲ ನಿರಂತರವಾಗಿದ್ದು ಭ್ರಷ್ಟಾಚಾರಲ್ಲಿ ತೊಡಗಿದ್ದಾರೆ. ದಲಿತರಿಗೆ ಸಿಗಬೇಕಾದ ಸವಲತ್ತುಗಳನ್ನು ಕೊಡದೆ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಆದ್ದರಿಂದ ಇವರುಗಳನ್ನು ಕೂಡಲೇ ಕಾಲಕಾಲಕ್ಕೆ ವರ್ಗಾವಣೆ ಮಾಡಬೇಕು.

15) ಪಂಚಾಯ್ತಿ ಅಧ್ಯಕ್ಷ/ಉಪಾಧ್ಯಕ್ಷರ ಅವಧಿ 2 ವರ್ಷಗಳು ಎಂದು ಸರ್ಕಾರದ ಆದೇಶವಿದ್ದರೂ ಸಹ 6-8 ತಿಂಗಳಿಗೊಮ್ಮೆ ಅಧ್ಯಕ್ಷ/ಉಪಾಧ್ಯಕ್ಷರ ಬದಲಾವಣೆ ಮಾಡುತ್ತಿರುತ್ತಾರೆ. ಇದರಿಂದ ಆಡಳಿತ ವ್ಯವಸ್ಥೆ ಕುಸಿದಿದೆ. ಇನ್ನು ಮುಂದೆ ಸರ್ಕಾರ ಕಟ್ಟುನಿಟ್ಟಾಗಿ ಸರ್ಕಾರದ ನಿಯಮ ಪಾಲಿಸಲು ಆದೇಶಿಸಬೇಕು.

16) ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಲ್ಲಿ ದಲಿತರ ಅಭಿವೃದ್ಧಿ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸದಿರುವುದನ್ನು ಕೂಡಲೇ ನ್ಯಾಯಾಂಗ ತನಿಖಗೆ ಒಳಪಡಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು.

17) ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ಭೂ ಒಡೆತನ ಯೋಜನೆಯ ಹಣವನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ರಾಜ್ಯ ಸರ್ಕಾರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ಭೀಮವಾದ),ರಾಜ್ಯ ಸಮಿತಿ, ಬೆಂಗಳೂರು ವತಿಯಿಂದ ಆಗ್ರಹಿಸಲಾಯಿತು.

City Today News 9341997936