ಕರ್ನಾಟಕ ರಾಜ್ಯದಲ್ಲಿರುವ 101 ಪ.ಜಾತಿಯ ಪಟ್ಟಿಯಲ್ಲಿರುವ 51 ಎಸ್.ಸಿ./ಎಸ್.ಟಿ. ಅಲೆಮಾರಿ ಸಮುದಾಯಕ್ಕೆ ಪ್ರತಿಯೊಂದು ಸಮುದಾಯಗಳಲ್ಲಿ ಶಿಕ್ಷಣ, ជ ២០៩ ab, (interse backwardness) ಸಾಬೀತು ಪಡಿಸಿ ಅಗತ್ಯ ಸಮೀಕ್ಷೆ/ ಅಧ್ಯಯನದ ಮೂಲಕ ಅಲೆಮಾರಿ ಸಮುದಾಯಗಳ ಮೀಸಲಾತಿಯನ್ನು ಕನಿಷ್ಠ 35 ಕಲ್ಪಿಸಿಕೊಡಬೇಕು

ಕರ್ನಾಟಕ ರಾಜ್ಯದಲ್ಲಿರುವ 101 ಪ.ಜಾತಿಯ ಪಟ್ಟಿಯಲ್ಲಿ 51 ಅಲೆಮಾರಿ ಸಮುದಾಯಗಳಾದ ಹಂದಿಜೋಗಿ, ಸಿಳ್ಳೇಕ್ಯಾಶಾಸ್, ಬುಡ್ಗಜಂಗಮ, ಸುಡುಗಾಡುಸಿದ್ದ, ಚನ್ನದಾಸರ್, ದೊಂಬರು, ಘಂಟಿಚೋರ್, ಕೊರಮ, ಕೊರಚ, ಮಾಂಗ್ ಗಾರುಡಿ, ಮುತ್ರಿ, ಅಬೇಲ, ಹಳ್ಳೇರ್, ನಲಿಕೆಯವ, ಸಿಂಧೋಳ್ಳು ಚಿಂಧೋಳ್ಳು, ಇತ್ಯಾದಿ 51 ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ ಬುಡಕಟ್ಟು, ಮೇದ, ಹಕ್ಕಿಪಿಕ್ಕಿ, ಇರುಳಿಗ, ರಾಜಗೊಂಡ, ಪಾರಿ, ಚೆಂಚು, ಹರಿಣಿಶಿಕಾರಿ, ಮಲೆಕುಡಿಯ, ಕಮ್ಮಾರ, ಹರಣಿಶಿಕಾರಿ, ದುಂಗಿಗರಾಸಿಯಾ ಇತ್ಯಾದಿ 23 ಬುಡಕಟ್ಟು ಹೀಗೆ ಒಟ್ಟು 74 ಅಲೆಮಾರಿ ಸಮುದಾಯಗಳು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯಿಂದ ವಂಚಿತವಾಗಿ ಇಂದಿಗೂ ಟೆಂಟು, ಗುಡಿಸಲು, ಹಾಡಿ ಪೋಡುಗಳಲ್ಲಿ ಪಾರಂಪರಿಕ ವೃತ್ತಿಗಳನ್ನು ಅವಲಂಬಿಸಿ ಅಸಂಘಟಿತರಾಗಿ ಬದುಕುತ್ತಿದ್ದಾರೆ. ಇವರು ಕಳೆದ 70 ವರ್ಷದಲ್ಲಿ ಯಾವುದೇ ಮೀಸಲಾತಿ ಸಿಗದೇ ಔದ್ಯೋಗಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಎಲ್ಲೂ ಇವರ ದತ್ತಾಂಶವಿಲ್ಲದ ಕಾರಣ ಮೀಸಲಾತಿಯಿಂದ ವಂಚಿತರಾಗಿ ನಿರ್ಲಕ್ಷಿಸಲ್ಪಟ್ಟಿರುತ್ತಾರೆ. ಮುಂದುವರೆದು ದೇವಿಂದರ್ ಸಿಂಗ್ ಮತ್ತು ಪಂಜಾಬ್ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಎಲ್ಲರಿಗೂ ತಿಳಿದ ಸಂಗತಿ.

ತೀರ್ಪಿನ ಮುಖ್ಯಾಂಶಗಳನ್ನು ಹೇಳುವುದಾದರೆ..

1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಇರುವ ಪ್ರತಿಯೊಂದು ಸಮುದಾಯಗಳಲ್ಲಿ ಶಿಕ್ಷಣ, ಉದ್ಯೋಗದಲ್ಲಿ “ಅಂತರ್ ಹಿಂದುಳಿದಿರುವಿಕೆ ಯನ್ನು (interse backwardness) ಸಾಬೀತು ಪಡಿಸಬೇಕು. ಅಗತ್ಯ ಸಮೀಕ್ಷೆ/ ಅಧ್ಯಯನದ ಮೂಲಕ ಇದನ್ನು ಪತ್ತೆ ಹಚ್ಚಬೇಕು.

2. “ವಾಸ್ತವಿಕ ದತ್ತಾಂಶಗಳ (empirical data) ಆಧಾರದಲ್ಲಿ ಪ್ರಾತಿನಿಧ್ಯದ ಕೊರತೆಯನ್ನು ಸಾಬೀತುಪಡಿಸಬೇಕು.

3. ಆನಂತರದಲ್ಲಿ ಪ್ರಾತಿನಿಧ್ಯದ ಕೊರತೆಯನ್ನು ಆಧಾರಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವರ್ಗೀಕರಣ ಮಾಡಬಹುದು.

4. ವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ರಾಜ್ಯ ಸರ್ಕಾರಗಳಿಗೆ ನೀಡಲಾಗಿರುವ ಈ ಅಧಿಕಾರವನ್ನು ಸಂವಿಧಾನಾತ್ಮಕವಾಗಿ ನಿರ್ವಹಿಸಬೇಕು. ಯಾವುದೇ ಸಮುದಾಯಗಳಿಗೆ ಅನಾನುಕೂಲ ಮಾಡುವ ಅಥವಾ ಸಮುದಾಯಗಳನ್ನು ಅವಕಾಶ ಮತ್ತು ಹಕ್ಕುಗಳಿಂದ ಹೊರಗಿಡುವ ಕಾರ್ಯವನ್ನು ಮಾಡಬಾರದು.

5. ರಾಜ್ಯ ಸರ್ಕಾರಗಳು ಮಾಡಬಹುದಾದ ವರ್ಗೀಕರಣ ಪ್ರಕ್ರಿಯೆಯು ನ್ಯಾಯಾಲಯದ ಪರಾಮರ್ಶೆಗೆ ಒಳಪಡಲಿದೆ.

ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಲ್ಲಿ ಈ ಮೇಲಿನ ಅಂಶಗಳಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಈಗ ರಾಜ್ಯ ಸರ್ಕಾರಗಳು ನ್ಯಾಯಾಲಯದ ನಿರ್ದೇಶನದ ಈ ಅಂಶಗಳನ್ನು ಪೂರೈಸಬೇಕು.

ಸಮುದಾಯಗಳ ಅಂತರ್ ಹಿಂದುಳಿದಿರುವಿಕೆ ಮತ್ತು ಪ್ರಾತಿನಿಧ್ಯದ ಕೊರತೆಯನ್ನು ವಾಸ್ತವಿಕ ದತ್ತಾಂಶಗಳ ಮೂಲಕ ನಿರೂಪಿಸಿ ಸಾಬೀತು ಪಡಿಸಬೇಕು. ಇದನ್ನು ಸಾಬೀತು ಪಡಿಸಲು ರಾಜ್ಯ ಸರ್ಕಾರದ ಬಳಿ ಇಲ್ಲಿಯವರೆಗೆ ಯಾವುದೇ ಅಧ್ಯಯನ, ಸಮೀಕ್ಷೆ, ಸುಲನೆ ಮಾಡಿರುವ ವರದಿಗಳು ಇರುವುದಿಲ್ಲ. ಸಮುದಾಯಗಳ ತಲಾ ಜನಸಂಖ್ಯೆ, ಶಿಕ್ಷಣ, ಉದ್ಯೋಗ, ಸಾಮಾಜಿಕ ಸ್ಥಿತಿಗಳ ಒಳಗೊಂಡಿರುವ ಅಲೆಮಾರಿಗಳ ವಾಸ್ತವಿಕ ದತ್ತಾಂಶಗಳು ಸರ್ಕಾರದ ಬಳಿ ಇಲ್ಲ. ಜಾತಿಗಳನ್ನು ವರ್ಗೀಕರಿಸಲು ಅಗತ್ಯವಿರುವ ಕುಲಶಾಸ್ತ್ರ ಅಧ್ಯಾಯನ, ಸಾಮಾಜಿಕ ಮತ್ತಿತರ ಅಂಶಗಳನ್ನು ಸಾಕಾರಗೊಳಿಸಬಹುದಾದ ವೈಜ್ಞಾನಿಕ ಮತ್ತು ಒಪ್ಪಿತ ವರದಿಗಳು ಸರ್ಕಾರದಲ್ಲಿ ಇರುವುದಿಲ್ಲ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳ ಅಗತ್ಯವಿದೆ. ವಿವಿಧ ರಾಜ್ಯಗಳು ಮತ್ತು ಸರ್ವ ಪಕ್ಷಗಳ ಅಭಿಪ್ರಾಯಗಳು ಕೂಡ ಇಲ್ಲಿ ಬೇಕಾಗಬಹುದು. ಕಾನೂನು ಮತ್ತು ಸಮಾಜಶಾಸ್ತ್ರ ತಜ್ಞರ ಅಭಿಪ್ರಾಯ ಕೂಡ ಅನಿವಾರ್ಯ.

ಈ ವರ್ಗೀಕರಣ ಪ್ರಕ್ರಿಯೆಗೆ ಸಹಕಾರಿ ಆಗುವಂತೆ ಹರಿಯಾಣ ರಾಜ್ಯ ಸರ್ಕಾರ ಹೊಸ ಆಯೋಗ ರಚಿಸಲು ನಿರ್ಧಾರ ಮಾಡಿರುವುದು ತಿಳಿದ ಸಂಗತಿ,

ನ್ಯಾಯ ಸಮ್ಮತ ಮತ್ತು ಸಂವಿಧಾನಾತ್ಮಕ ಅಂಶಗಳ ದೃಷ್ಟಿಯಿಂದ ರಾಜ್ಯ ಸರ್ಕಾರ ಹೊಸದೊಂದು ಅಧ್ಯಯನ ಮಾಡಬೇಕು. ಅದಕ್ಕಾಗಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಈಗಾಗಲೇ ನಮ್ಮ ಬೇಡಿಕೆಯಂತೆ ಅಲೆಮಾರಿಗಳಿಗೆ ಪ್ರತ್ಯೇಕ ಎಸ್.ಸಿ/ಎಸ್‌.ಟಿ ಅಲೆಮಾರಿಗಳ ಆಯೋಗಕ್ಕಾಗಿ ಬೇಡಿಕೆ ಇಡಲಾಗಿತ್ತು ಆದರೆ ಸರ್ಕಾರವು ಕಳೆದ ಬಜೆಟ್‌ನಲ್ಲಿ ಎಸ್.ಸಿ/ಎಸ್‌.ಟಿ ಅಲೆಮಾರಿ ಆಯೋಗದ ಬದಲಿಗೆ ಹಿಂದುಳಿದ ವರ್ಗದ ಅಲೆಮಾರಿಗಳ ಆಯೋಗ ರಚನೆ ಮಾಡಿದೆ ಅದೇ ಮಾದರಿಯಲ್ಲಿ ಎಸ್.ಸಿ/ಎಸ್.ಟಿ ಅಲೆಮಾರಿ ಸಮುದಾಯಗಳ ಆಯೋಗದ ರಚನೆ ಮಾಡಿ ಸಮುದಾಯಗಳ ಸ್ಥಿತಿಗತಿಗಳನ್ನು ಅರಿತು ಕನಿಷ್ಠ ಎಸ್.ಸಿ/ಎಸ್.ಟಿ ಅಲೆಮಾರಿ ಸಮುದಾಯಗಳಿಗೆ 3% ಮೀಸಲಾತಿ ಕಲ್ಪಿಸಿಕೊಡಬೇಕೆಂದು ಈ ಮೂಲಕ ನಮ್ಮ ಎಸ್.ಸಿ/ಎಸ್.ಟಿ ಅಲೆಮಾರಿ ಸಮುದಾಯಗಳ ಪರವಾಗಿ ಆಗ್ರಹಿಸುತ್ತದೆ ಎಂದು ಒಕ್ಕೂಟದ ಆಧರ್ಶಯಲ್ಲಪ್ಪ-ಅಧ್ಯಕ್ಷರು,ಬಿ.ಹೆಚ್.ಮಂಜುನಾಥ್-ಪ್ರಧಾನ ಕಾರ್ಯದರ್ಶಿ (ಸಂ), ಹಾಗೂ ಬಸವರಾಜ ನಾರಾಯಣಕರ-ಖಜಾಂಚಿ ಯವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

ಈ ತಿಂಗಳ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ನೇರವೇತನ ಪೌರಕಾರ್ಮಿಕರಿಗೆ “ಖಾಯಂ ಭಾಗ್ಯ” ಕೊಟ್ಟು, ಖಾಯಂ ಪಟ್ಟಿ ಬಿಡುಗಡೆ ಮಾಡಲೇಬೇಕೆಂದು ಒತ್ತಾಯಿಸುತ್ತಿದ್ದೇವೆ.

ಈ ತಿಂಗಳ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ನೇರವೇತನ ಪೌರಕಾರ್ಮಿಕರಿಗೆ “ಖಾಯಂ ಭಾಗ್ಯ” ಕೊಟ್ಟು, ಖಾಯಂ ಪಟ್ಟಿ ಬಿಡುಗಡೆ ಮಾಡಲೇಬೇಕೆಂದು ಒತ್ತಾಯಿಸುತ್ತಿದ್ದೇವೆ ಹಾಗೂ ರಾಜ್ಯಾದ್ಯಂತ ಕೆಲವೊಂದು ಜಿಲ್ಲೆಗಳಲ್ಲಿ ಆದೇಶಗಳನ್ನು ಜಾರಿಗೊಳಿಸಿರುವುದಿಲ್ಲ. ಈ ಕೂಡಲೇ ಆದೇಶಗಳನ್ನು ಜಾರಿಗೊಳಿಸಬೇಕೆಂದು, ತಮ್ಮ ಪತ್ರಿಕೆ ಹಾಗೂ ಮಾಧ್ಯಮದ ಮುಖಾಂತರ ಸರ್ಕಾರ ಹಾಗೂ ಪಾಲಿಕೆಯನ್ನು ಒತ್ತಾಯಿಸುತ್ತಿದ್ದೇವೆ.”

ಈ ಮೇಲ್ಕಾಣಿಸಿದ ಮಹಾಸಂಘದ ವತಿಯಿಂದ ಹಲವಾರು ಹೋರಾಟಗಳ ಫಲವೇ ರಾಜ್ಯಾದ್ಯಂತ 24500 ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಹಿಂದಿನ ಸರಕಾರ ಹಾಗೂ ಇಂದಿನ ಸರಕಾರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದರು ಸಹ ಇಲ್ಲಿಯವರವಿಗೂ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರವೇತನ ಪೌರಕಾರ್ಮಿಕರ ಖಾಯಂ ಪಟ್ಟಿ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರ್ದೈವದ ಸಂಗತಿ, ಅದೇ ರೀತಿ ರಾಜ್ಯದ ಇನ್ನೂ ಕೆಲವೊಂದು ಜಿಲ್ಲೆಗಳಲ್ಲಿ (ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ) 2018ರಲ್ಲೇ ಗುತ್ತಿಗೆ ಪದ್ದತಿ ರದ್ದಾಗಿದ್ದರೂ, ಸಹ ಇಂದಿಗೂ ಗುತ್ತಿಗೆ ಪದ್ದತಿಯಲ್ಲೇ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವುದು ಗಮನಾರ್ಹ ವಿಷಯವಾಗಿರುತ್ತದೆ.

ಆದ್ದರಿಂದ ಈ ಕೆಳಕಂಡ ಆದೇಶಗಳನ್ನು ಜಾರಿಗೊಳಿಸದೆ ತಡ ಮಾಡುತ್ತಿರುವ ಸರ್ಕಾರ ಹಾಗೂ ನಗರಪಾಲಿಕೆಗಳಿಗೆ ಈ ಕೂಡಲೇ ಜಾರಿಗೊಳಿಸಲು ಒತ್ತಾಯಿಸುತ್ತಿದ್ದೇವೆ.

1) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಈಗಾಗಲೇ ಘೋಷಿಸಿದಂತೆ, ಈ ತಿಂಗಳ ಒಳಗಾಗಿ ಖಾಯಂ ಪಟ್ಟಿ (ಮೊದಲನೇ ಹಂತ 3673 ಹಾಗೂ ಎರಡನೇ ಹಂತ 11307 ಒಟ್ಟು 14980) ಬಿಡುಗಡೆ ಮಾಡಲೇಬೇಕು.

2) ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ (ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ) ಇನ್ನೂ ಗುತ್ತಿಗೆ ಪದ್ದತಿ ಮುಂದುವರೆಯುತ್ತಿದ್ದು, ಈ ಕೂಡಲೇ ಗುತ್ತಿಗೆ ಪದ್ದತಿ ರದ್ದು ಮಾಡಿ ಖಾಯಂ ಮಾಡಬೇಕು.

3) ಬೆಂಗಳೂರು ಮಹಾನಗರ ಪಾಲಿಕೆಯೂ ಸೇರಿದಂತೆ ರಾಜ್ಯಾದ್ಯಂತ ಕಸಸಾಗಾಣಿಕೆ ಲಾರಿ ಚಾಲಕರು, ಆಟೋ ಚಾಲಕರು, ಹೆಲ್ಪರ್‌ಗಳು ಹಾಗೂ ಕ್ಲೀನರ್‌ಗಳನ್ನು ಗುತ್ತಿಗೆ ಪದ್ದತಿಯಿಂದ ವಿಮುಕ್ತಿಗೊಳಿಸಿ ನೇರವೇತನ ಅಡಿಯಲ್ಲಿ ನೇಮಿಸಿಕೊಳ್ಳಬೇಕು.

4) ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಒಳಚರಂಡಿ ಮಂಡಳಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡಲೇಬೇಕು.

5) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 60 ವರ್ಷ ತುಂಬಿದ ನೇರವೇತನ ಪೌರಕಾರ್ಮಿಕರನ್ನು ಕೆಲಸದಿಂದ ನಿಲ್ಲಿಸಿದ್ದು, ನಿವೃತ್ತಿ ವೇತನ ಕೊಡಲು ಆದೇಶವಾಗಿದ್ದರೂ ಸಹ ಇದುವರೆಗೂ ಬಿಡುಗಡೆ ಮಾಡಿರುವುದಿಲ್ಲ, ಈ ಕೂಡಲೇ ನಿವೃತ್ತಿ ವೇತನ ಬಿಡುಗಡೆ ಮಾಡಬೇಕು. ಹಾಗೆ ನಿವೃತ್ತಿಯಾದ ಹಾಗೂ ಮರಣ ಹೊಂದಿದ ಕುಟುಂಬದ ಅವಲಂಬಿತರಿಗೆ ಒಂದು ಹುದ್ದೆ ನೀಡಬೇಕು.

6) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಿರಿಯ ಆರೋಗ್ಯ ಪರಿವೀಕ್ಷಕರುಗಳನ್ನು ಪಾಲಿಕೆಯೇ ನೇರವೇತನ ಅಡಿಯಲ್ಲಿ ನೇಮಿಸಿಕೊಳ್ಳಬೇಕು.

ಈ ಎಲ್ಲವು ಆದೇಶಗಳಾಗಿದ್ದು, ಈ ಕೂಡಲೇ ಜಾರಿಗೊಳಿಸಲು ಮತ್ತೊಮ್ಮೆ ಸರ್ಕಾರಕ್ಕೆ ಹಾಗೂ ಪಾಲಿಕೆಗೆ ಒತ್ತಾಯಿಸುತ್ತಿದ್ದೇವೆ. “ಇದನ್ನು ತಮ್ಮ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಮ್ಮ ಸಂಪೂರ್ಣ ಬೆಂಬಲ ಈ ಬಡ ಶ್ರಾಮಿಕ ವರ್ಗದವರಿಗೆ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇವೆ.” ಎಂದು  ಮಹಾಸಂಘದ ವತಿಯಿಂದ ಶ್ರೀನಾರಾಯಣ (ಮೈಸೂರು),ಬಿ.ಎಂ.ಸುರೇಶ್ ಬಾಬು ಹಾಗೂ ಮುಖಂಡರುಗಳು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

City Today News 9341997936

ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ (ಕೆ.ಬಿ.ಜೆ.ಎನ್.ಎಲ್) ಹಸನಾಪೂರ ಕಾರ್ಯಪಾಲಕ ಇಂಜಿನಿಯರ್ ಹೊಲಗಾಲುವ ವಿಭಾಗ-2, ಮತ್ತು ಕೃಷ್ಣಾ-ಕಾಡಾ ಭೀಮನರಾಯನಗುಡಿ ಅಧೀನದಲ್ಲಿ ಬರುವ ವಿಭಾಗ ಮತ್ತು ಉಪ ವಿಭಾಗ ಕಾರ್ಯಾಲಯ ಹಾಗೂ ಉಪ ವಿಭಾಗ ಕಛೇರಿ ಬಾತಾಂಬ್ರ ಬೀದರ್ ಜಿಲ್ಲೆಯ ಹುದ್ದೆ ಸಮೇತ ಸ್ಥಳಾಂತರದ ಆದೇಶವನ್ನು ರದ್ದುಪಡಿಸಿ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಅಗ್ರಹ.

(ಕೆ.ಬಿ.ಜೆ.ಎನ್.ಎಲ್) . ಕೃಷ್ಣಾ-ಕಾಡಾದ ಹಸನಾಪುರ ವಿಭಾಗ ಮತ್ತು ಉಪ ವಿಭಾಗದ ಕಛೇರಿಗಳನ್ನು ಕಿತ್ತೂರು ಕರ್ನಾಟಕಕ್ಕೆ ಸ್ಥಳಾಂತರಗೊಳಿಸುವ ಹೈದ್ರಾಬಾದ್ ಕರ್ನಾಟಕ ವಿರೋಧಿ ನಿತಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ಈ ಕಛೇರಿ ಸ್ಥಳಾಂತರದಿಂದ ಲಕ್ಷಾಂತರ ಜನ ರೈತರಿಗೆ ತೊಂದರೆ ಉಂಟು ಆಗುತ್ತದೆ ಮತ್ತು 150ಕ್ಕೂ ಹೆಚ್ಚು ಹೈದ್ರಾಬಾದ್ ಕರ್ನಾಟಕದ ಸರ್ಕಾರಿ ನೌಕರರಿಗೆ ಅನ್ಯಾಯವಾಗುವುದು ವಿಷಾದನೀಯವಾಗಿದೆ.

ಹೈದ್ರಾಬಾದ್ ಕರ್ನಾಟಕವು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಈ ಭಾಗವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಪ್ರದೇಶವಾಗಿರುವುದರಿಂದ ಈ ಹಿಂದೆ 2013 ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ 371(ಜೆ) ಕಲಂನ್ನು ಜಾರಿಗೆ ತಂದು ಈ ಭಾಗದ ಸರ್ವಾಂಗೀಣ ಅಭಿವೃದ್ದಿಗಾಗಿ ಶ್ರಮಿಸಿರುವುದು ಸ್ವಾಗತಾರ್ಹವಾಗಿದೆ. (ಕೆ.ಬಿ.ಜೆ.ಎನ್.ಎಲ್) ಹಸನಾಪೂರ ಕಾರ್ಯಪಾಲಕ ಇಂಜಿನಿಯರ್ ಹೊಲಗಾಲುವ ವಿಭಾಗ-2, ಕಛೇರಿಗಳನ್ನು ಈ ಭಾಗದಿಂದ ಸ್ಥಳಾಂತರ ಮಾಡುವುದರಿಂದ 150ಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಕಳೆದುಕೊಳ್ಳುತ್ತವೆ ಮತ್ತು ಇಲ್ಲಿಯ ಯುವಕರಿಗೆ ಮತ್ತು ಲಕ್ಷಾಂತರ ರೈತರಿಗೆ ಮಾಡುವ ಬಹುದೊಡ್ಡ ಮೋಸವಾಗಿದೆ. ಈಗಾಗಲೇ ಈ ಭಾಗದ ರೈತರು ಕೆಲವೊಮ್ಮ ಅತೀವೃಷ್ಟಿಯಿಂದ ಕೆಲವೊಮ್ಮ ಅನಾವೃಷ್ಟಿಯಿಂದ ಕಂಗಾಲಾಗಿ ನೇಣಿಗೆ ಶರಣಾಗಿರುವ ಹಲವಾರು ಪ್ರಕರಣಗಳು ಸರ್ಕಾರದ ಗಮನದಲ್ಲಿದ್ದು, ಆದರೂ ಕೂಡ ಕೆಲವೊಂದು ಪಟ್ಟಭದ್ರ ಹಿತಾಶಕ್ತಿಗಳ ಕುತಂತ್ರದಿಂದ ನಮ್ಮ ಭಾಗದಲ್ಲಿರುವ ಕಛೇರಿಗಳನ್ನು ಕಿತ್ತೂರು ಕರ್ನಾಟಕಕ್ಕೆ ಸ್ಥಳಾಂತರ ಮಾಡಲು ಸರ್ಕಾರ ಆದೇಶ ಹೊರಡಿಸಿರುವುದು ನೋವಿನ ಸಂಗತಿಯಾಗಿದೆ ಹಾಗೂ ಇದರಿಂದಾಗಿ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗದೇ ಮತ್ತು ಈ ಭಾಗದ ಸರ್ಕಾರಿ ನೌಕರರಿಗೆ 371(ಜೆ) ಕಲಂ ಅಡಿ ಮುಂಬಡ್ತಿ ಸಿಗದೆ ಎಲ್ಲಾ ರಂಗದಲ್ಲೂ ಈ ಭಾಗಕ್ಕೆ ಅನ್ಯಾಯವಾಗುವುದು ವಾಸ್ತವವಾಗಿದೆ.

ಅದಕ್ಕಾಗಿ ನಾವುಗಳು ದಿನಾಂಕ: 21-02-2024 ರಂಂದು ಪ್ರೀಡಂಪಾರ್ಕ ಬೆಂಗಳೂರು ಇಲ್ಲಿ ಹೈದ್ರಾಬಾದ್ ಕರ್ನಾಟಕ ವಿರೋಧಿ ನೀತಿಯನ್ನು ಖಂಡಿಸಿ ಉಗ್ರವಾದ ಪ್ರತಿಭಟನೆ ಮಾಡುತ್ತಿದ್ದು, ಹೈದ್ರಾಬಾದ್ ಕರ್ನಾಟಕದ ಒಳತಿಗಾಗಿ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇವೆ. ಗಂಭೀರವಾಗಿ ಇದನ್ನು ಪರಿಗಣಿಸಿ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಹಾಗೂ ಸದನದಲ್ಲಿ ಚರ್ಚಿಸಿ ಕಛೇರಿ ಸ್ಥಳಾಂತರದ ವಿಷಯವನ್ನು ಇಲ್ಲಿಗೆ ಕೈಬಿಟ್ಟು ಹೈದ್ರಾಬಾದ ಕರ್ನಾಟಕದ ರೈತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ತಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇವೆ. ಹಾಗೂ ಹೈದ್ರಾಬಾದ್ ಕರ್ನಾಟಕದ ಕಛೇರಿಯನ್ನು ಬೇರೆ ವಿಭಾಗಕ್ಕೆ ಸ್ಥಳಾಂತರ ಮಾಡಲು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಾಗಿತ್ತು. ಆದರೆ ಸಚಿವ ಸಂಪುಟದಲ್ಲಿ ಯಾವುದೇ ಚರ್ಚ ಮಾಡದೆ ಈ ರೀತಿಯ ಹೈದ್ರಾಬಾದ ಕರ್ನಾಟಕ ಜನ ವಿರೋಧಿ ನೀತಿ ಮಾಡಿರುವುದು ತುಂಬಾ ನೋವಿನ ವಿಷಯವಾಗಿದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

ಪತ್ರಿಕಾ ಗೋಷ್ಠಿ ಯಲ್ಲಿ ಹೋರಾಟ ಸಮಿತಿಯ ಮುಕಾಂಡರಾದ ಸೈಬಣ್ಣಾ ಜಮಾದಾರ,ಚನ್ನವೀರ ತಂಗ,
ಶಿವು ರಾಠೋಡ್,ಸಂಜು ಹೊಡಲ್ಕರ್ ಮತ್ತು ಡಿ.ಎಸ್. ಹಡಲಗಿ ಉಪಸ್ಥಿತರಿದ್ದರು.

City Today News 9341997936

ಕಳೆದ 44 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 10450 ಗ್ರಾಮ ಸಹಾಯಕರನ್ನು ಸರ್ಕಾರವು ‘ಡಿ’ ದರ್ಜೆ ನೌಕರರೆಂದು ಪರಿಗಣಿಸದೆ ಇರುವುದರಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ ದಲ್ಲಿ ಪಾದಯಾತ್ರೆಯ ಮೂಲಕ ಸರ್ಕಾರದ ಗಮನ ಸೆಳೆಯಲು ಮುಷ್ಕರ

ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಕಛೇರಿಗಳ ರದ್ದತಿ ಕಾಯ್ದೆ 1961ರ ಅನ್ವಯ ಜಾರಿಯಿಂದಾಗಿ 00:01-02-1963 ರಿಂದ ಅನ್ವಯವಾಗುವಂತೆ ವಂಶಪಾರಂಪಯ್ಯದ ಎಲ್ಲಾ ಗ್ರಾಮೀಣ ಹಂತದ ವಿಲೇಜ್ ಆಫೀಸರ್ಸ್ ಹುದ್ದೆಗಳು ರದ್ದಾದರಿಂದ ಕೆಳ ಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ತಾತ್ಕಾಲಿಕ ಆಧಾರದ ಮೇಲೆ ಯಾವುದೇ ವಂಶಪಾರಂಪಯ್ಯ ಹಕ್ಕುಗಳು ಅನ್ವಯವಾಗದಂತೆ ಆಡಳಿತಾತ್ಮಕ ಅನುಕೂಲಕ್ಕಾಗಿ ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಿಗರಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರಿ ಆದೇಶಗಳಲ್ಲಿ 10450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದೆ. ಹಾಲಿ ನಮಗೆ ಮಾಸಿಕ ರೂ.13,000/- ಗಳನ್ನು ಹೊರತುಪಡಿಸಿ ಬೇರೆ ಯಾವುದೇ ಇತರೆ ಭತ್ಯೆಗಳು ಇರುವುದಿಲ್ಲ. ಇಂದಿನ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಜೀವನ ನಿರ್ವಹಣೆಗೆ ಕಷ್ಟಕರವಾಗಿರುತ್ತದೆ. ಹಾಗೂ ಇಂದಿನ ಮಾಸಿಕ ರೂ.13,000/- ಗಳಲ್ಲಿ ಮಕ್ಕಳ ವಿದ್ಯಾಭ್ಯಾಸ ಹಿರಿಯರ ಪಾಲನೆ ಪೋಷಣೆ ಮತ್ತು ವೈದ್ಯಕೀಯ ಚಿಕಿತ್ಸೆ ವೆಚ್ಚಭರಿಸಲು ದುಸ್ಥಿತಿಯಾಗಿರುತ್ತದೆ. ಸರ್ಕಾರಕ್ಕೆ ಈಗಾಗಲೇ ಹಲವು ಮನವಿಗಳನ್ನು ಕೇಂದ್ರ ಸಂಘ ಸಲ್ಲಿಸಿಕೊಂಡಿದ್ದರೂ ಸಹಾ ಈ ಬಗ್ಗೆ ಸರ್ಕಾರವು ಗಮನ ಹರಿಸಿರುವುದಿಲ್ಲ. ಗ್ರಾಮ ಸಹಾಯಕರಿಗೆ ಯಾವುದೇ ಸೇವಾ ನಿಯಮಾವಳಿ ಹಾಗೂ ಸೇವಾ ಭದ್ರತೆಯನ್ನು ನೀಡಿರುವುದಿಲ್ಲ. ಗ್ರಾಮ ಸಹಾಯಕರು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸಹಾಯ ಮಾಡಲು ಹಾಗೂ ಮಾಹಿತಿ ನೀಡಲು ನೇಮಕ ಮಾಡಿಕೊಂಡಿರುತ್ತಾರೆ.

ಈಗಾಗಲೇ ಗ್ರಾಮ ಸಹಾಯಕರನ್ನು 2007ನೇ ಸಾಲಿನಲ್ಲಿ 10450 ಹುದ್ದೆಗಳು ಮಿತವೇತನದ ಆಧಾರದ ಮೇಲೆ ಸರ್ಕಾರವು ಖಾಯಂ ಮಾಡಿರುತ್ತದೆ. ಆದರೆ, ಇಲ್ಲಿಯವರೆವಿಗೂ ವೇತನ ಪರಿಷ್ಕರಣೆ ಆಗಿರುವುದಿಲ್ಲ. 2012ನೇ ಸಾಲಿನಲ್ಲಿ ಮಾನ್ಯ ಅಡ್ವಕೋಟ್ ಜನರಲ್ ರವರು ಗ್ರಾಮ ಸಹಾಯಕರನ್ನು ‘ಡಿ’ ದರ್ಜೆ ಮಾಡುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಿರುತ್ತಾರೆ ಆದರೂ ಸರ್ಕಾರವು ಇಲ್ಲಿಯವರೆವಿಗೂ ಗ್ರಾಮ ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಾಗಲೀ, ‘ಡಿ’ ದರ್ಜೆ ಎಂದು ಪರಿಗಣಿಸುವುದಾಗಲೀ ಕಂಡು ಬಂದಿರುವುದಿಲ್ಲ.

ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳಿಗೆ 2023-ಸೆಪ್ಟೆಂಬರ್ ತಿಂಗಳಿನಲ್ಲಿ ಈ ಬಗ್ಗೆ ಮನವಿ ಸಲ್ಲಿಸಿರುತ್ತದೆ ಮತ್ತು ಮಾನ್ಯ ಕಂದಾಯ ಸಚಿವರಿಗೆ ಹಾಗೂ ಮಾನ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಕೇಂದ್ರ ಸಂಘವು ಈ ಬಗ್ಗೆ ಮನವಿ ಸಲ್ಲಿಸಿರುತ್ತದೆ. ಆದರೆ ಇಲ್ಲಿಯವರೆವಿಗೂ ಗ್ರಾಮ ಸಹಾಯಕರ ಬೇಡಿಕೆಗಳ ಬಗ್ಗೆ ಸರ್ಕಾರವು ಕ್ರಮ ಕೈಗೊಂಡಿರುವ ಬಗ್ಗೆ ಕೇಂದ್ರ ಸಂಘಕ್ಕೆ ಮಾಹಿತಿ ಇರುವುದಿಲ್ಲ.

ಆದ್ದರಿಂದ ದಿನಾಂಕ:04-12-2023 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಗ್ರಾಮ ಸಹಾಯಕರ ಕೇಂದ್ರ ಸಂಘವು ಕಿತ್ತೂರು ರಾಣಿ ಚೆನ್ನಮ್ಮ ಅರಮನೆ (ಬೆಳಗಾವಿ ಜಿಲ್ಲೆ)ಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆಯ ಮೂಲಕ ಮುಷ್ಕರವನ್ನು ಹಮ್ಮಿಕೊಂಡಿರುತ್ತದೆ ಎಂದು ಹೆಚ್‌.ಎನ್‌.ದೇವರಾಜು, ಅಧ್ಯಕ್ಷರು ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದರು

ಪತ್ರಿಕಾ ಘೋಷ್ಠಿಯಲ್ಲಿ ಜನಾರ್ಧನ್ ಬಂಟ್ವಾಳ,ಗೌರವ ಅಧ್ಯಕ್ಷರು, ಬಿ.ಶಿವರುದ್ರಪ್ಪ,ಪ್ರಧಾನ ಕಾರ್ಯದರ್ಶಿ, ಶ್ರೀನಿವಾಸ್,ಖಜಾಂಚಿ ಮತ್ತು ಸಂಘದ ಮುಖಂಡರುಗಳು ಉಪಸ್ತಿತರಿದ್ದರು.

City Today News 9341997936

ಆಡು, ಕುರಿ ಕಳ್ಳತನ ಪ್ರಕರಣದಲ್ಲಿ ಭರಮಸಾಗರ ಪೊಲೀಸರ (ಚಿತ್ರದುರ್ಗ ಜಿಲ್ಲೆ) ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ವರ್ತನೆಯಿಂದ ಲಿಂಗ ಅಲ್ಪಸಂಖ್ಯಾತ ಮಹಿಳೆ ಅರುಂಧತಿ ಒಂದು ತಿಂಗಳಿನಿಂದ ನರಳುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಕೊಳಹಾಳ್ (ಭರಮಸಾಗರ, ಚಿತ್ರದುರ್ಗ ಜಿಲ್ಲೆ) ದಲ್ಲಿ ಸುಮಾರು ಐದು ವರ್ಷಗಳಿಂದ ವಾಸವಾಗಿದ್ದು, ಜೀವನ ನಿರ್ವಹಣೆಗಾಗಿ ಹೈನುಗಾರಿಕೆ ಮಾಡಿಕೊಂಡಿದ್ದು, 45
ಮೇಕೆ 05 ಕುರಿಗಳನ್ನು ಸಾಕಾಣಿಕೆ ಮಾಡಿಕೊಂಡಿದ್ದರು. ದಿನಾಂಕ:26-10-2023 ರಂದು
ಸುಮಾರು ಹತ್ತು ಲಕ್ಷ ರೂಪಾಯಿ ಬೆಳೆಬಾಳುವ ಮೇಕೆ ಮತ್ತು ಕುರಿಗಳ ಕಳ್ಳತನವಾಗಿದ್ದು,
ಭರಮಸಾಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ನಿದಾನದ ಗತಿಯಲ್ಲಿ ತನಿಖೆ ನಡೆಸುತ್ತಿರುವ ಕಾರಣಕ್ಕೆ ಈ ವಿಷಯವನ್ನು ದಿನಾಂಕ: 30-10-2023 ರಂದು ಚಿತ್ರದುರ್ಗ ಜಿಲ್ಲಾ ಎಸ್.ಪಿ ಯವರ ಗಮನಕ್ಕೆ ತಂದು ನಾವು ಲಿಖಿತವಾಗಿ ಪತ್ರವನ್ನೂ ಸಲ್ಲಿಸಿದ್ದೇವೆ. ಆ ನಂತರವೂ ಪೊಲೀಸ್ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದು ಪೊಲೀಸರ ಮೇಲಿನ ಭರವಸೆಯನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ. ಇದು ಅರುಂದತಿಯ ಜೀವನವನ್ನು ಕೆಟ್ಟದಾಗಿ ಬಾಧಿಸುತ್ತಿದೆ ಮತ್ತು ಆಕೆಯ ಜೀವನವು ಅಸ್ಥಿರವಾಗಿದೆ. ಭರಮಸಾಗರ ಪೊಲೀಸರು ಈ ವಿಷಯದಲ್ಲಿ ತುರ್ತಾಗಿ ತನಿಖೆ ನಡೆಸುವಂತೆ ಚಿತ್ರದುರ್ಗ ಜಿಲ್ಲಾ ಎಸ್ಪಿ ಮತ್ತು ಡಿಸಿ ಅವರು ಆದೇಶಿಸಬೇಕು ಮತ್ತು ಅರುಂಧತಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ.

ಲಿಂಗತ್ವ ಅಲ್ಪಸಂಖ್ಯಾತರು ಕೇವಲ ಭಿಕ್ಷೆ ಬೇಡಿ ಜೀವನ ಮಾಡುತ್ತಾರೆ ಎನ್ನುವ ಈ ಸಮಾಜದ ಮಧ್ಯೆ 45 ಮೇಕೆ 05 ಕುರಿಗಳನ್ನು ಸಾಕಾಣಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ನನಗೆ ಈ ಘಟನೆ ಇಂದ ಅಘಾಥವಾಗಿದೆ. ಭವಿಷ್ಯದಲ್ಲಿ ನನ್ನ ಜೀವನವನ್ನು ನಡೆಸಲು ನನಗೆ ಯಾವುದೇ ಮಾರ್ಗವನ್ನು ನೋಡಲು ಸಾಧ್ಯವಾಗುತ್ತಿಲ್ಲ – ನನ್ನ ಭವಿಷ್ಯವು ಕತ್ತಲೆಯಾಗಿದೆ. ಲೈಂಗಿಕ ವೃತ್ತಿ ಮತ್ತು ಭಿಕ್ಷಾಟನೆ ಮಾಡದ ನಾನು ಕುರಿ ಸಾಕಾಣಿಕೆಯಲ್ಲೇ ಜೀವನ ಮುಂದು ವರಿಸಬೇಕೆಂದಿದ್ದೇನೆ. ಆದರೆ ಪೋಲೀಸ್ ರವರ ನಿರ್ಲಕ್ಷದಿಂದ ದಾರಿತೋರದಾಗಿದೆ ಎಂದು ನೊಂದ ಅರುಂಧತಿ ತಿಳಿಸಿದರು.

ಲಿಂಗತ್ಯ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿ (Movement for Gender and Sexual Diversity) ಯ ಸಹ ಅಧ್ಯಕ್ಷರಾದ ವೈಶಾಲಿ ಯವರು ಮಾತನಾಡಿ, ಈ ಘಟನೆಯಲ್ಲಿ ಪೋಲೀಸು ವರ್ತನೆ, ಖಂಡನೀಯ ಲಿಂಗತ್ವ ಅಲ್ಪಸಂಖ್ಯಾರಲ್ಲಿ ಸ್ವಂತ ಕಾಲಿನ ಮೇಲೆ ನಿಂತು ದುಡಿಯುವ ಜನರು ಬಹಳ ಕಮ್ಮಿ, ಅವರಲ್ಲಿ ಒಬ್ಬರಾದ ಅರುಂದತಿಯರಿಗೆ ಈ ರೀತಿ ಯಾಗಿರುವುದನ್ನು ಪೋಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸದೇ ಇರುವುದು ಬಹಳ ನೋವಾಗಿದೆ. ಆಕೆಗೆ ನ್ಯಾಯ ಸಿಗದಿದ್ದಲ್ಲಿ ನಲ್ಲಿ ನಮ್ಮ ಚಳುವಳಿಯ ಮೂಲಕ ಚಿತ್ರದುರ್ಗ ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಗಾಗಿ ಚಳುವಳಿ (Movement for Gender and Sexual Diversity) ಯ ಮತ್ತೊಬ್ಬ ಸಹ ಅಧ್ಯಕ್ಷರಾದ ಅಶ್ವಿನಿ ರಾಜನ್ ರವರು ಮಾತನಾಡಿ ಲಿಂಗತ್ವ ಅಲ್ಪಸಂಖ್ಯಾರತ ಸ್ವಾವಲಂಭಿ ಜೀವನಕ್ಕಾಗಿ ಸರ್ಕಾರದ ಯಾವುದೇ ವಿಷೇಶ ಯೋಜನೆ ಇಲ್ಲದಿದ್ದರೂ, ಸಮುದಾಯದವರಿಗೆ ಮಾದರಿಯಾಗುವಂತೆ ಸ್ವಂತ ಹಣ ದಿಂದ ಜೀವನ ಕಟ್ಟಿಕೊಂಡಿದ್ದ ಅರುಂಧತಿಯವರಿಗೆ ಪೋಲೀಸ್ ಇಲಾಖೆ ನೆರವಿಗೆ ನಿಲ್ಲಬೇಕು, ಆ ಕಾರಣಕ್ಕೆ ನಾವು ಇಂದು ಮಧ್ಯಾಹ್ನ ಐ.ಜಿ. ಯವರನ್ನು ಸಹ ಬೇಟಿ ಮಾಡಲಿದ್ದೇವೆ. ನಂತರವೂ ನ್ಯಾಯಸಿಗದೇ ಇದ್ದಲ್ಲಿ ವೈಷ್ಣವಿ ಯವರು ತಿಳಿಸಿದ ಹಾಗೆ ಚಳುವಳಿಯ ಮೂಲಕ ಚಿತ್ರದುರ್ಗ ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

City Today News 9341997936